ಇನ್ಮುಂದೆ ಎಲ್ಲಾ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ 10 ಗಂಟೆಯೊಳಗೆ ಕಚೇರಿಯಲ್ಲಿರಬೇಕು – ಸಿಎಂ ಡಿಕೆಶಿ ಖಡಕ್ ಸೂಚನೆ!

ಬೆಂಗಳೂರು : ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಆಡಳಿತ ಚುರುಕುಗೊಳಿಸಿದ್ದು, ಇನ್ಮುಂದೆ ಎಲ್ಲಾ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ಬೆಳಗ್ಗೆ 10 ಗಂಟೆಯೊಳಗೆ ಕಚೇರಿಯಲ್ಲಿಬೇಕು ಎಂದು ಸಿಎಂ ಖಡಕ್ ಸೂಚನೆ ನೀಡಿದ್ದಾರೆ.

ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಪಾರದರ್ಶಕ ಆಡಳಿತ ತರುವ ಉದ್ದೇಶದೊಂದಿಗೆ ಬಯೋಮೆಟ್ರಿಕ್‌ ವ್ಯವಸ್ಥೆ ಬದಲಾಗಿ ಕೃತಕ ಬುದ್ಧಿಮತ್ತೆ(AI) ಮತ್ತು ಜಿಪಿಎಸ್‌ ಆಧರಿತ ಹಾಜರಾತಿಯನ್ನ ಕಡ್ಡಾಯಗೊಳಿಸಿದೆ. ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್‌ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.

ಮುಖ್ಯಮಂತ್ರಿಗಳ ಸೂಚನೆ ಮೇರೆಗೆ, ಪ್ರತಿಯೊಬ್ಬ ಸರ್ಕಾರಿ ಅಧಿಕಾರಿ, ಸಿಬ್ಬಂದಿ ಇನ್ಮುಂದೆ ಬೆಳಗ್ಗೆ 10 ಗಂಟೆಯೊಳಗೆ ಕಡ್ಡಾಯವಾಗಿ ಕಚೇರಿಗೆ ಹಾಜರಾಗಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಆದೇಶ ಕೊಟ್ಟಿದ್ದಾರೆ.

ಆದೇಶದಲ್ಲಿ ಏನಿದೆ?

ಮುಖ್ಯಮಂತ್ರಿಗಳು ಜೂನ್‌ 4 ರಂದು ನಡೆದ ಸಭೆಯಲ್ಲಿ, ರಾಜ್ಯ ಸರ್ಕಾರದ ಪ್ರತಿಯೊಬ್ಬ ಅಧಿಕಾರಿ ಮತ್ತು ಸಿಬ್ಬಂದಿಯು ಪ್ರತಿದಿನ ಬೆಳಗ್ಗೆ 10 ಗಂಟೆಯೊಳಗೆ ಕಡ್ಡಾಯವಾಗಿ ಕಚೇರಿಗೆ ಹಾಜರಾಗಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಪ್ರಸ್ತುತ ಇ-ಆಡಳಿತ ಇಲಾಖೆಯು ಸಿದ್ಧಪಡಿಸಿರುವ `ಕರ್ತವ್ಯ App’ ನಲ್ಲಿ ಈಗಾಗಲೇ HRMS ನಲ್ಲಿ ಲಭ್ಯವಿರುವ ಎಲ್ಲಾ ಅಧಿಕಾರಿಗಳು ಹಾಗೂ ವರ್ಗದ ಮಾಹಿತಿಯನ್ನ ನೋಂದಾಯಿಸಲಾಗಿದೆ. ಆದ್ರೆ ಬಳಷ್ಟು ಅಧಿಕಾರಿ/ಸಿಬ್ಬಂದಿಗಳು ಈ ತಂತ್ರಾಂಶವನ್ನ (App) ನಿರಂತರವಾಗಿ ಬಳಸುತ್ತಿಲ್ಲದಿರುವುದು ಕಂಡುಬಂದಿದೆ. ಆದ್ದರಿಂದ ಈ ನಿರ್ದೇಶನ ತಪ್ಪದೇ ಪಾಲಿಸಲು ಸೂಚಿಸಲಾಗಿದೆ.

ಇದನ್ನೂ ಓದಿ : ‘ಮ್ಯಾಂಗೋ ಪಚ್ಚ’ ಗ್ರ್ಯಾಂಡ್ ರಿಲೀಸ್ – ಎಲ್ಲೆಡೆ ಭರ್ಜರಿ ರೆಸ್ಪಾನ್ಸ್.. ಸಂಚಿತ್ ಸಂಜೀವ್ ಮಾಸ್ ಲುಕ್​ಗೆ ಫ್ಯಾನ್ಸ್​ ಫಿದಾ!

Btv Kannada
Author: Btv Kannada

Leave a Comment

Read More

Read More