ಮೈಸೂರು : ಜಿಲ್ಲೆಯಲ್ಲಿರುವ ಯುನೈಟೆಡ್ ಬ್ರಿವರೀಸ್ ಲಿಮಿಟೆಡ್ ಘಟಕದ ಮೇಲೆ ನಿನ್ನೆ ಅಬಕಾರಿ ಜಂಟಿ ಆಯುಕ್ತರು ದಾಳಿ ನಡೆಸಿದ್ದಾರೆ. ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಮೈಸೂರು ಜಿಲ್ಲೆಯ ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿರುವ ಬಿಯರ್ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಲಾಗಿದ್ದು, ದೂರವಾಣಿ ಮೂಲಕ ಬಂದ ಮಾಹಿತಿ ಆಧರಿಸಿ ಅಧಿಕಾರಿಗಳು ರೇಡ್ ಮಾಡಿದ್ದಾರೆ.
ಬಿಯರ್ ತಯಾರಿಕಾ ಘಟದಲ್ಲಿ ದಾಳಿ ವೇಳೆ ಸರ್ಕಾರಕ್ಕೆ ತೋರಿಸಿರುವ ದಾಸ್ತಾನು ಲೆಕ್ಕಕ್ಕಿಂತ ಅಧಿಕ ಸಂಗ್ರಹ ಪತ್ತೆಯಾಗಿದ್ದು, ಈ ಹಿನ್ನಲೆ ಅಬಕಾರಿ ಜಂಟಿ ಆಯುಕ್ತರ ತಂಡ 98 ಕೋಟಿ 52 ಲಕ್ಷ ರೂ ಮೊತ್ತದ ಬಿಯರ್, ಕಚ್ಚಾ ವಸ್ತುವನ್ನು ಜಪ್ತಿ ಮಾಡಿದೆ. ಘಟಕದಲ್ಲಿ ನಿಗದಿಗಿಂತ ಹೆಚ್ಚುವರಿ ಬಿಯರ್ ತಯಾರಿಸಿ ಕೇರಳಕ್ಕೆ ಸಾಗಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ.
ಇನ್ನು, 7000 ಸಾವಿರ ವಿವಿಧ ಬ್ರಾಂಡಿನ ಪೆಟ್ಟಿಗೆಗಳಲ್ಲಿದ್ದ ಬಿಯರ್ ಬಾಟಲಿಗಳು ರೇಡ್ ವೇಳೆ ಪತ್ತೆಯಾಗಿದೆ. ಯುಟಿ ಟ್ಯಾಂಕ್, ಸೈಲೋಸ್ ಟ್ಯಾಂಕ್ ಗಳಲ್ಲಿರುವ ಕಚ್ಚಾ ವಸ್ತು ಸಮೇತ ಅಧಿಕಾರಿಗಳು ಜಪ್ತಿ ಮಾಡಿದ್ದು, ಈ ಘಟನೆ ಸಂಬಂಧ 17 ಮಂದಿ ವಿರದ್ಧ ದೂರು ದಾಖಲಾಗಿದೆ. ಸದ್ಯ ಅಬಕಾರಿ ಪೊಲೀಸರು ನಾಪತ್ತೆಯಾದವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಇಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ..!