ಬಳ್ಳಾರಿ : ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆ ಹಿನ್ನೆಲೆ ಇಡೀ ದೇಶಾದ್ಯಂತ ನೀತೆ ಸಂಹಿತೆ ಜಾರಿಯಾಗಿದ್ದು, ಅಲ್ಲಲ್ಲಿ ಚೆಕ್ಪೋಸ್ಟ್ಗಳನ್ನು ಹಾಕಿರುವ ಪೊಲೀಸರು ಮತ್ತು ಚುನಾವಣಾಧಿಕಾರಿಗಳು, ಚುನಾವಣಾ ಅಕ್ರಮಗಳನ್ನು ತಡೆಯಲು ಹದ್ದಿನ ಕಣ್ಣಿಟ್ಟಿದ್ದಾರೆ.
ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕೋಟಿ ಕೋಟಿ ಹಣ, ಮದ್ಯ, ಚಿನ್ನಾಭರಣ ಸೀಜ್ ಮಾಡಲಾಗಿದೆ. ಇದರ ಬೆನ್ನಲ್ಲೇ ಬಳ್ಳಾರಿಯಲ್ಲಿ ನಗರ ಪೊಲೀಸರು ಬಳ್ಳಾರಿಯ ಸಿಟಿ ಬ್ರೂಸ್ ಪೇಟೆಯಲ್ಲಿ ರೇಡ್ ಮಾಡಿ ಕೋಟಿ ಕೋಟಿ ಹಣ ವಶಕ್ಕೆ ಪಡೆದಿದ್ದಾರೆ.
ಪಕ್ಕ ಮಾಹಿತಿ ಮೇರೆಗೆ ಬಳ್ಳಾರಿ ಅಡಿಷನಲ್ SP ಕೆ.ಪಿ ರವಿಕುಮಾರ್ ತಂಡ ದಾಳಿ ನಡೆಸಿದೆ. ದಾಳಿ ಮಾಡಿದ ವೇಳೆ ಪೊಲೀಸರಿಗೆ ಶಾಕ್ ಎದುರಾಗಿದ್ದು, ಮನೆಯೊಂದರಲ್ಲಿ ಅಕ್ರಮವಾಗಿ ಇಟ್ಟಿದ್ದ 5.60 ಕೋಟಿ ಹಣ, 3kg ಚಿನ್ನ ಹಾಗೂ 68 ಕೆ.ಜಿ ಬೆಳ್ಳಿ ಪತ್ತೆಯಾಗಿದೆ. ನರೇಶ್ ಎಂಬ ವ್ಯಕ್ತಿ ತನ್ನ ಮನೆಯಲ್ಲಿ ಕೋಟಿ ಕೋಟಿ ಹಣ ಶೇಖರಣೆ ಮಾಡಿದ್ದನು.
ರೇಡ್ ಮಾಡಿದ ಪೊಲೀಸರು ಮನೆಯಲ್ಲಿ ಶೇಖರಣೆ ಮಾಡಿದ್ದ, 5.6 ಕೋಟಿ ಕಂತೆ ಕಂತೆ ನೋಟು, 1.6 ಕೋಟಿ ಮೌಲ್ಯದ ಚಿನ್ನಭರಣ ಹಾಗೂ 68 ಕೆ.ಜಿ ಬೆಳ್ಳಿ ಸೀಝ್ ಮಾಡಿದ್ದಾರೆ. ಇನ್ನು ಈ ಬಗ್ಗೆ ಬಳ್ಳಾರಿ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಇದನ್ನೂ ಓದಿ : ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ‘ಕಾಲರಾ’ ಟೆನ್ಷನ್ : ನಗರದಲ್ಲಿ ಮತ್ತೊಂದು ಕಾಲರಾ ಪ್ರಕರಣ ಪತ್ತೆ..!