ರಾಯಚೂರು : ಲೋಕಸಭೆ ಚುನಾವಣೆ ಹಿನ್ನೆಲೆ ಇಡೀ ದೇಶಾದ್ಯಂತ ನೀತಿ ಸಂಹಿತೆ ಜಾರಿಯಾಗಿದ್ದು, ಅಲ್ಲಲ್ಲಿ ಚೆಕ್ಪೋಸ್ಟ್ಗಳನ್ನು ಹಾಕಿರುವ ಪೊಲೀಸರು ಮತ್ತು ಚುನಾವಣಾಧಿಕಾರಿಗಳು, ಚುನಾವಣಾ ಅಕ್ರಮಗಳನ್ನು ತಡೆಯಲು ಹದ್ದಿನ ಕಣ್ಣಿಟ್ಟಿದ್ದಾರೆ.
ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕೋಟಿ ಕೋಟಿ ಹಣ, ಮದ್ಯ, ಚಿನ್ನಾಭರಣ ಸೀಜ್ ಮಾಡಲಾಗಿದೆ. ಇದರ ಬೆನ್ನಲ್ಲೇ ಇದೀಗ ರಾಯಚೂರಿನಲ್ಲಿ 3.5 ಲಕ್ಷ ಹಣ ಪತ್ತೆಯಾಗಿದೆ. ಲಿಂಗಸುಗೂರು ತಾಲೂಕಿನ ಛತ್ತರ್ ಚೆಕ್ ಪೋಸ್ಟ್ನಲ್ಲಿ ಹಣ ಪತ್ತೆಯಾಗಿದ್ದು, ತಾಲೂಕು ಕಲ್ಯಾಣ ಅಧಿಕಾರಿ ರಮೇಶ್ G ರಾಠೋಡ್ ರೇಡ್ ಮಾಡಿ ಹಣ ವಶಕ್ಕೆ ಪಡೆದಿದ್ದಾರೆ. ಚುನಾವಣಾಧಿಕಾರಿಗಳು ಹಣ ಸಾಗಿಸುತ್ತಿದ್ದವರನ್ನು ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ.
ಇದನ್ನೂ ಓದಿ : ಗದಗ : ಹಾಡಹಗಲೇ ಪತ್ನಿಯನ್ನ ಮಚ್ಚಿನಿಂದ ಕೊಚ್ಚಿ ಕೊಲೆಗೆ ಯತ್ನ – ಆರೋಪಿ ಪತಿ ವಶಕ್ಕೆ..!
Post Views: 158