ಬೆಂಗಳೂರು : ಐತಿಹಾಸಿಕ ಬೆಂಗಳೂರು ಕರಗ ಉತ್ಸವ ನಾಳೆಯಿಂದಲೇ ಆರಂಭವಾಗಲಿದ್ದು, ಈಗಾಗಲೇ ಸಿದ್ಧತೆಗಳು ಭರದಿಂದ ಸಾಗಿವೆ. ಶ್ರೀ ಧರ್ಮರಾಯಸ್ವಾಮಿ ದೇವಾಲಯವು ಸುಣ್ಣ-ಬಣ್ಣಗಳಿಂದ ಕಂಗೊಳಿಸುತ್ತಿದ್ದು, ಕರಗ ಸಾಗುವ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ.
ಬೆಂಗಳೂರು ಕರಗ ಮಹೋತ್ಸವ ಏಪ್ರಿಲ್ 15 ರಿಂದ 23 ರವರೆಗೆ ನಡೆಯಲಿದ್ದು, ಈ ಬಾರಿಯೂ ಕರಗದ ಪೂಜಾರಿ ಎ.ಜ್ಞಾನೇಂದ್ರ ಅವರು ಕರಗ ಹೊರಲಿದ್ದಾರೆ. 13 ನೇ ಬಾರಿ ಬೆಂಗಳೂರು ಕರಗ ಹೊರಲು ಎ.ಜ್ಞಾನೇಂದ್ರ ಅವರನ್ನು ಮುಜರಾಯಿ ಮತ್ತು ಧರ್ಮರಾಯ ಸ್ವಾಮಿ ದೇವಾಲಯದ ಆಡಳಿತ ಮಂಡಳಿ ಆಯ್ಕೆ ಮಾಡಿದೆ.
- ಏಪ್ರಿಲ್ 15 ರಾತ್ರಿ 10ಕ್ಕೆ ರಥೋತ್ಸವ ಧ್ವಜಾರೋಹಣ
- ಏಪ್ರಿಲ್ 16 ರಿಂದ 19 ಪ್ರತಿ ದಿನ ವಿಶೇಷ ಪೂಜೆ ಮತ್ತು ಮಂಗಳಾರತಿ
- ಏಪ್ರಿಲ್ 21ಕ್ಕೆ ಹಸಿ ಕರಗ ಆಯೋಜನೆ
- ಏಪ್ರಿಲ್ 23 ರಂದು ಕರಗ ಶಕ್ತ್ಯೋತ್ಸವ ಮತ್ತು ಧರ್ಮರಾಯ ರಥೋತ್ಸವ
- ಏಪ್ರಿಲ್ 24ರಂದು ದೇವಸ್ಥಾನದಲ್ಲಿ ಗಾವು ಪೂಜೆ
- 25ಕ್ಕೆ ಕೊನೆಯ ದಿನದ ವಸಂತೋತ್ಸವ ಧ್ವಜಾರೋಹಣ
ಇದನ್ನೂ ಓದಿ : ರಾಜ್ಯಕ್ಕೆ ಮೋದಿ ಎಂಟ್ರಿಯಿಂದ ರಂಗೇರಿದ ಲೋಕ ಅಖಾಡ – ನಮೋ ಸ್ವಾಗತಕ್ಕೆ ಭರ್ಜರಿ ಸಿದ್ಧತೆ..!
Post Views: 266