ತುಮಕೂರು : ಬಿಜೆಪಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಕಾರ್ಯಕರ್ತೆಯರು ಹೈಡ್ರಾಮಾ ಸೃಷ್ಟಿಸಿದ ಪ್ರಸಂಗ ನಿನ್ನೆ ತುಮಕೂರಿನಲ್ಲಿ ನಡೆದಿದೆ. ಕಾಂಗ್ರೆಸ್ ಕಾರ್ಯಕರ್ತೆಯರು ಮಾಜಿ ಪ್ರಧಾನಿ ದೇವೇಗೌಡರಿದ್ದ ವೇದಿಕೆಗೆ ನುಗ್ಗಿ ಕೆಲಕಾಲ ಗೊಂದಲ ಸೃಷ್ಟಿಸಿದರು. ಅಲ್ಲದೇ ಕುಮಾರಸ್ವಾಮಿ ಹಾಗೂ ದೇವೇಗೌಡರ ವಿರುದ್ಧ ಘೋಷಣೆ ಕೂಗಿ ಹೈಡ್ರಾಮಾ ಮಾಡಿದ್ದಾರೆ.
ತುಮಕೂರಿನ ಕುಂಚಿಟಿಗರ ಸಭಾಭವನದಲ್ಲಿ ಮೈತ್ರಿ ಸಮಾವೇಶ ನಡೆಯುತ್ತಿತ್ತು. ಕಾರ್ಯಕರ್ತೆಯರ ಸೋಗಿನಲ್ಲಿ ಇಬ್ಬರು ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ಬಂದು ಸಭೆಯಲ್ಲಿ ಕೂತಿದ್ದರು.
ಏಕಾಏಕಿ ಕುಮಾರಸ್ವಾಮಿಯವರ ಗ್ಯಾರೆಂಟಿಯಿಂದ ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂಬ ಹೇಳಿಕೆ ಖಂಡಿಸಿ ಕುಮಾರಸ್ವಾಮಿ ಹಾಗೂ ದೇವೇಗೌಡರ ವಿರುದ್ಧ ಘೋಷಣೆ ಕೂಗಿದರು. ಇದೇ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಪೊಲೀಸರು ಎಂಟ್ರಿ ಕೊಟ್ಟು ಕಾಂಗ್ರೆಸ್ ಕಾರ್ಯಕರ್ತೆಯರನ್ನ ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ : ರಾಯಚೂರು : ಅಕ್ರಮವಾಗಿ ಮರಳು ಸಾಗಿಸ್ತಿದ್ದ ಟ್ರ್ಯಾಕ್ಟರನ್ನು ಸೀಜ್ ಮಾಡಲು ಹೋದಾಗ ಅನಾಹುತ – ಪೊಲೀಸ್ ಜೀಪ್ ಪಲ್ಟಿ..!
Post Views: 203