ಬೆಂಗಳೂರು : ಮಾಜಿ ಮೇಯರ್ ಆರ್.ನಾರಾಯಣಸ್ವಾಮಿ ಮನೆಯಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿರುವ ಘಟನೆ ಬೆಂಗಳೂರಿನ ಸಂಜಯನಗರದಲ್ಲಿ ನಡೆದಿದೆ.
ನಗರದ ಆರ್ಎಂವಿ 2ನೇ ಹಂತದಲ್ಲಿರುವ ಮನೆಯಲ್ಲಿ ಘಟನೆ ನಡೆದಿದ್ದು, ಮನೆಯ ಸೆಕ್ಯೂರಿಟಿ ಗಾರ್ಡ್ ನರಬಹದ್ದೂರ ಶಾಯಿಯಿಂದ ಕೃತ್ಯ ನಡೆದಿರಬಹುದು ಎಂದು ಶಂಕಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ಬೆಲೆಬಾಳುವ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ.
ಒಟ್ಟು 1,29,17,000 ಮೌಲ್ಯದ ಚಿನ್ನಾಭರಣ, ಬೆಳ್ಳಿ, ವಾಚ್ಗಳು ಹಾಗೂ ನಗದು ಕಳ್ಳತನ ಮಾಡಲಾಗಿದೆ. 99,75,000 ರೂ. ಮೌಲ್ಯದ 1,425 ಗ್ರಾಂ ಚಿನ್ನಾಭರಣ, 18,92,000 ರೂ. ಮೌಲ್ಯದ 22 ಕೆಜಿ ಬೆಳ್ಳಿ ವಸ್ತುಗಳು, 6.50 ಲಕ್ಷ ರೂ. ಮೌಲ್ಯದ 3 ವಾಚ್ಗಳು ಹಾಗೂ 4 ಲಕ್ಷ ರೂ. ನಗದು ಹಣ ದೋಚಿದ್ದಾರೆ.
ಈ ಕುರಿತು ಆರ್.ನಾರಾಯಣಸ್ವಾಮಿ ಸಂಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸೆಕ್ಯೂರಿಟಿ ಗಾರ್ಡ್ ನರಬಹದ್ದೂರ ಶಾಯಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಇಂದು ಹುಬ್ಬಳ್ಳಿಗೆ..!