ಮಂಡ್ಯ : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ರಾಜ್ಯ ಬಿಜೆಪಿ ಲೋಕಸಮರಕ್ಕೆ ಬರದ ಸಿದ್ದತೆ ನಡೆಸುತ್ತಿದೆ. 20 ಕ್ಷೇತ್ರಗಳನ್ನು ಗೆಲ್ಲುವ ಗುರಿಯನ್ನು ಆಡಳಿತರೂಢ ಕಾಂಗ್ರೆಸ್ ಹಾಕಿಕೊಂಡಿದ್ರೆ, ಇತ್ತ ಕಮಲ ಪಡೆ 28 ಕ್ಕೆ 28 ಸ್ಥಾನಗಳನ್ನು ಗೆಲ್ಲುವ ಉದ್ದೇಶದಿಂದ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಕಳೆದ ಬಾರೀ ಗೆದ್ದ ಸ್ಥಾನಗಳಿಗಿಂತ ಹೆಚ್ಚು ಸ್ಥಾನ ಗೆಲ್ಲಬೇಕು ಎಂಬ ಪ್ಲಾನ್ ಹಾಕಿಕೊಂಡಿದೆ.
ಇದೀಗ ಪ್ರಚಾರ ಕಾರ್ಯದಲ್ಲಿ ತೊಡಗಿರುವ ದಳಪತಿ ಸಕ್ಕರೆ ನಾಡು ಮಂಡ್ಯದಲ್ಲಿ ಇಂದು ಶಕ್ತಿ ಪ್ರದರ್ಶನ ಮಾಡಲಿದ್ದಾರೆ. ಶ್ರೀರಂಗಪಟ್ಟಣದಲ್ಲಿ ಹೆಚ್ಡಿಕೆ ಬೃಹತ್ ಸಮಾವೇಶದಲ್ಲಿ ಮಾಡಲಿದ್ದು, ಬಹಿರಂಗ ಸಮಾವೇಶದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ ಮತಯಾಚನೆ ಮಾಡಲಿದ್ದಾರೆ.
ತಾಲೂಕು ಕ್ರೀಡಾಂಗಣದಲ್ಲಿ ಹೆಚ್ಡಿಕೆ ಸಮಾವೇಶಕ್ಕೆ ಭರ್ಜರಿ ತಯಾರಿ ನಡೆಸಲಾಗಿದೆ. ಈ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ, ಮಾಜಿ ಸಚಿವರಾದ ಪುಟ್ಟರಾಜು, ನಾರಾಯಣಗೌಡ, ಜಿ .ಟಿ.ದೇವೇಗೌಡ, ಸಾರಾ ಮಹೇಶ್ ಸೇರಿ ಜೆಡಿಎಸ್ ಮತ್ತು ಬಿಜೆಪಿಯ ಹಲವು ನಾಯಕರು ಹಾಗೂ ಕಾರ್ಯಕರ್ತರು ಭಾಗಿಯಾಗಲಿದ್ದಾರೆ.
ಇದನ್ನೂ ಓದಿ : ಮೋದಿ ಬಂದು ಹೋದ ಬೆನ್ನಲ್ಲೇ ಮತ್ತೆ ತೆರಿಗೆ ಅಸ್ತ್ರ – ಟ್ವೀಟ್ ಮೂಲಕ ಬಿಜೆಪಿ ವಿರುದ್ಧ ಸಿಡಿದ ‘ಕೈ’ ಪಡೆ..!