ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಶಾಂತಿಯ ಗ್ಯಾರಂಟಿ ಇಲ್ಲ. ರಾಜ್ಯದಲ್ಲಿ ಕೊಲೆ, ಹಲ್ಲೆ, ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಇದೊಂದು ಕ್ರೂರ ಸರ್ಕಾರ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕಿಡಿಕಾರಿದ್ದಾರೆ.
ಬೆಂಗಳೂರಿನ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಠಿ ನಡೆಸಿ ಬಿ.ಎಸ್ ಯಡಿಯೂರಪ್ಪ ಮಾತನಾಡಿ, ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ನಡೆದಿದೆ. ಮಂಡ್ಯದಲ್ಲಿ ಕೇಸರಿ ಧ್ವಜ ತೆರವು ಮಾಡಿಸಿದ್ರು. ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ಮಾಡಿದ್ರು. ಶ್ರೀರಾಮ ಭಕ್ತರ ಮೇಲೆ ಅಟ್ಯಾಕ್ಗೆ ಪ್ರೇರಣೆ ಕೊಟ್ಟರು. ಮೋದಿಗೆ ಮತಹಾಕಿ ಎಂದಿದ್ದಕ್ಕೆ ಕಾರು ಹರಿಸಿದ್ರು. ಮೋದಿಗಾಗಿ ಹಾಡು ಬರೆದವರ ಮೇಲೆ ಹಲ್ಲೆ ಮಾಡಲಾಯ್ತು. ಈ ಎಲ್ಲಾ ಘಟನೆಗಳಿಂದ ರಾಜ್ಯದಲ್ಲಿ ಉಗ್ರ ಚಟುವಟಿಕೆಗೆ ಗ್ಯಾರಂಟಿ ಸಿಕ್ಕಿದೆ. ಕಾಂಗ್ರೆಸ್ ಒಂದೇ ವರ್ಷದಲ್ಲಿ ರಾಜ್ಯವನ್ನು ಮತಾಂಧರ ನಾಡು ಮಾಡಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ್ಮೇಲೆ ಅಭಿವೃದ್ಧಿ ಕುಸಿದಿದೆ. ರಾಜ್ಯದಲ್ಲಿ 1 ಕಿ.ಮೀ ರಸ್ತೆ ಕಾಮಗಾರಿ ಕೂಡಾ ನಡೆದಿಲ್ಲ.ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ಮುಚ್ಚಲು ಆಗ್ತಿಲ್ಲ. ಸ್ವತಃ ನಾನೇ ಕಾಂಗ್ರೆಸ್ ನಾಯಕರ ಜತೆ ಬರ್ತೀನಿ ಅಭಿವೃದ್ಧಿ ತೋರಿಸಲಿ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಯಡಿಯೂರಪ್ಪ ಗುಡುಗಿದ್ದಾರೆ. ಇಷ್ಟು ಮಾತ್ರವಲ್ಲದೇ ರಾಜ್ಯದಲ್ಲಿ ಕಲ್ಲು ಬಂಡೆಯ ಮನಸ್ಸಿನ ಸರ್ಕಾರ ಇದೆ. ಕರ್ನಾಟಕದಲ್ಲಿ 700ಕ್ಕೂ ಹೆಚ್ಚು ರೈತರ ಆತ್ಮಹತ್ಯೆಯಾಗಿದೆ. ರಾಜ್ಯದ ನೀರಾವರಿ ಯೋಜನೆ ನಿಂತು ಹೋಗಿವೆ. ಈ ಬಾರಿಯ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಲಿದೆ ಎಂದು ಬಿಎಸ್ವೈ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇನ್ನು ನಿನ್ನೆ ಪ್ರಧಾನಿ ಮೋದಿ ರಾಜ್ಯಕ್ಕೆ ಎಂಟ್ರಿ ಹೊತ್ತಿನಲ್ಲೇ ಕಾಂಗ್ರೆಸ್ ನಾಯಕರು ಚೊಂಬು ಹಿಡಿದು ಪ್ರತಿಭಟಿಸಿದ್ದಾರೆ. ಈ ವಿಚಾರಕ್ಕೆ ಕಾಂಗ್ರೆಸ್ಗೆ ಬಿಜೆಪಿ ರಾಜಾಹುಲಿ ತಿರುಗೇಟು ನೀಡಿ, ಕಾಂಗ್ರೆಸ್ನ ಇಂಥಾ ಸುಳ್ಳು ಪ್ರಚಾರದಿಂದ ಲಾಭ ಆಗೋದಿಲ್ಲ. ಕೇಂದ್ರ ಸರ್ಕಾರ ರಾಜ್ಯಕ್ಕೆ ಏನು ಕೊಡ್ಬೇಕೋ ಕೊಟ್ಟಿದೆ. ಈಗಾಗಲೇ ಪ್ರಧಾನಿ ಮೋದಿಯವರೇ ಇದನ್ನು ಸ್ಪಷ್ಟಪಡಿಸಿದ್ದಾರೆ.ನಾಳೆ ಅಮಿತ್ ಶಾ ಬರ್ತಾರೆ ದಾಖಲೆ ಸಮೇತ ಎಲ್ಲಾ ಹೇಳ್ತಾರೆ. ಸುಳ್ಳು ಹರಡಿ ರಾಜ್ಯದ ಜನರನ್ನು ದಿಕ್ಕು ತಪ್ಪಿಸಲು ಆಗಲ್ಲ. ರಾಜ್ಯದ ಜನರಿಗೆ ಮೋದಿ ಸಾಧನೆ ಬಗ್ಗೆ ಅರಿವಿದೆ ಎಂದು ಬೆಂಗಳೂರಿನಲ್ಲಿ ಕಾಂಗ್ರೆಸ್ಗೆ ಬಿಎಸ್ವೈ ಪ್ರತ್ಯುತ್ತರ ನೀಡಿದ್ದಾರೆ.
ಇದನ್ನೂ ಓದಿ : ‘ಹೊಸತರ’ ಸಿನಿಮಾದ ಮೂಲಕ ನಿರ್ದೇಶಕನಾಗಿ ಸ್ಯಾಂಡಲ್ವುಡ್ಗೆ ಎಂಟ್ರಿ ಕೊಟ್ಟ ಅಫ್ಜಲ್..!