ಚಿತ್ರದುರ್ಗ : ಪೋಕ್ಸೋ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಮುರುಘಾಶ್ರೀಗೆ ಸುಪ್ರೀಂಕೋರ್ಟ್ನಲ್ಲಿ ಬಿಗ್ ಶಾಕ್ ಎದುರಾಗಿದೆ. ಚಿತ್ರದುರ್ಗದ ಮುರುಘಾಶ್ರೀಗೆ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಒಂದು ವಾರದಲ್ಲಿ ವಿಚಾರಣಾ ಕೋರ್ಟ್ಗೆ ಹಾಜರಾಗಬೇಕು, 4 ರಿಂದ 6 ತಿಂಗಳೊಳಗೆ ತನಿಖೆ ಮುಗಿಸಬೇಕು ಎಂದು ಆದೇಶದ ವೇಳೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಮುರುಘಾಶ್ರೀ ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿದ್ದು, ಒಂದನೇ ಪೋಕ್ಸೋ ಕೇಸ್ನಲ್ಲಿ ಮುರುಘಾಶ್ರೀಗೆ ಜಾಮೀನು ರದ್ದು ನೀಡಿದ್ದು, ನ್ಯಾಯಮೂರ್ತಿ ವಿಕ್ರಮ್ನಾಥ್ ಪೀಠ ಈ ಆದೇಶ ಹೊರಡಿಸಿದೆ. ಇದು ಅತ್ಯಂತ ಸೂಕ್ಷ್ಮ ಪ್ರಕರಣ ಎಂದು ಕೋರ್ಟ್ ಪರಿಗಣಿಸಿದೆ.
ಕೆಲ ತಿಂಗಳುಗಳ ಹಿಂದೆ ಸ್ವಾಮೀಜಿಗಳಿಗೆ ಕರ್ನಾಟಕ ಹೈಕೋರ್ಟ್ ಹಲವು ಷರತ್ತುಗಳೊಂದಿಗೆ ಜಾಮೀನು ನೀಡಿತ್ತು. ಬಳಿಕ ಅರ್ಜಿದಾರರು ಆರೋಪಿ ಬಂಧನದಿಂದ ಹೊರಗಿದ್ದು, ಸಾಕ್ಷಿ ನಾಶಪಡಿಸಬಹುದು ಎಂದು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಇಂದು ಪ್ರಕರಣ ವಿಚಾರಣೆ ಮಾಡಿದ ಸುಪ್ರೀಂ ಕೋರ್ಟ್ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ರದ್ದುಗೊಳಿಸಿ ಪುನಃ ನ್ಯಾಯಾಂಗ ಬಂಧನಕ್ಕೆ ಕಳುಹಿಸುವಂತೆ ಆದೇಶ ನೀಡಿದೆ.
ಏನಿದು ಪ್ರಕರಣ :
ಮುರುಘಾಶ್ರೀ ವಿರುದ್ಧ 2022 ಆಗಸ್ಟ್ 31 ರಂದು ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ಸೆಪ್ಟೆಂಬರ್ 1ರಂದು ಬಂಧನವಾಗಿತ್ತು. ಸುಮಾರು 14 ತಿಂಗಳ ಕಾಲ ಜೈಲಿನಲ್ಲಿದ್ದ ಶ್ರೀಗಳು 2023 ನವೆಂಬರ್ 16ರಂದು ಷರತ್ತು ಬದ್ಧ ಜಾಮೀನಿನ ಮೇಲೆ ಹೊರಗೆ ಬಂದಿದ್ದರು.
ಇದನ್ನೂ ಓದಿ : ವಿಧಾನಸೌಧ ದುರ್ಬಳಕೆ : ಸರ್ಕಾರದ ಮುಖ್ಯ ಕಾರ್ಯದರ್ಶಿ, ಪ್ರತಿಭಟಿಸಿದ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ದೂರು..!