ಕಲಬುರಗಿ : ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ ವಿಚಾರಕ್ಕೆ ಕಲಬುರಗಿ ಜಿಲ್ಲೆ ಅಫಜಲಪುರ್ ತಾಲೂಕಿನ ಬಡದಾಳ ಗ್ರಾಮದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರು ಕಚ್ಚಾಡಿದ್ದಾರೆ.
ಅಫಜಲಪುರ ಕಾಂಗ್ರೆಸ್ ಶಾಸಕ ಎಂ.ವೈ.ಪಾಟೀಲ್ ಎದುರೇ ಮಾತಿನ ಚಕಮಕಿ ನಡೆದಿದೆ. ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಮತಯಾಚನೆಗಾಗಿ ಬಡದಾಳ ಗ್ರಾಮಕ್ಕೆ ಶಾಸಕ ಪಾಟೀಲ್ ಬಂದಿದ್ದರು. ಈ ವೇಳೆ ಗ್ರಾಮದ ರಸ್ತೆ ಮಾಡಿ ಅಂದಾಗ ಎಲ್ಲಿ ಹೋಗಿದ್ರಿ ಎಂದು ಕೆಲ ಬಿಜೆಪಿ ಕಾರ್ಯಕರ್ತರು ಪ್ರಶ್ನಿಸಿದ್ದರು.
ಈ ವೇಳೆ ಜೈ ಶ್ರೀರಾಮ್ ಅಂತಾ ಘೋಷಣೆ ಹಾಕಿದ್ರು. ಇದರಿಂದ ಸಿಟ್ಟಾದ ಕಾಂಗ್ರೆಸ್ ಕಾರ್ಯಕರ್ತರು ಪ್ರತಿ ಘೋಷಣೆ ಹಾಕಲು ಮುಂದಾಗಿದ್ದಾರೆ. ಇದ್ರಿಂದಾಗಿ ಕೆಲ ಹೊತ್ತು ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಕೊನೆಗೆ ಸ್ಥಳೀಯರು ಎರಡೂ ಕಡೆಯವರನ್ನು ಸಮಾಧಾನ ಮಾಡಿದ್ದಾರೆ.
ಇದನ್ನೂ ಓದಿ : ಬೆಂಗಳೂರಿನಲ್ಲಿ 3 ಎಕರೆ ಅರಣ್ಯ ಪ್ರದೇಶದಲ್ಲಿ ಬೆಂಕಿ : ಲಕ್ಷಾಂತರ ಮೌಲ್ಯದ ಮರಗಳು ಸುಟ್ಟು ಭಸ್ಮ..!
Post Views: 100