ಕಂಡಕ್ಟರ್ ಯಡವಟ್ಟಿನಿಂದ ಕ್ಯಾಂಟೀನ್​​ಗೆ ನುಗ್ಗಿದ BMTC ಬಸ್ – ಮಹಿಳೆ ಸಾವು, ಮಗುವಿನ ಸ್ಥಿತಿ ಗಂಭಿರ!

ಬೆಂಗಳೂರು : ಇಂದು ಬೆಳ್ಳಂಬೆಳಗ್ಗೆ ಸಿಲಿಕಾನ್​ ಸಿಟಿಯಲ್ಲಿ ಭೀಕರ ಬಸ್​ ಅಪಘಾತ ಸಂಭವಿಸಿದೆ. ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನ್ನಪ್ಪಿದ್ದು, ಮಗು ಗಂಭೀರವಾಗಿ ಗಾಯಗೊಂಡಿರೋ ಘಟನೆ ಪೀಣ್ಯ 2ನೇ ಹಂತದಲ್ಲಿ ನಡೆದಿದೆ.

ಘಟಕ 22ಕ್ಕೆ ಸೇರಿದ KA.51,4170 ನಂಬರ್ ಬಸ್​ ಡ್ರೈವರ್ ಮತ್ತು ಕಂಡಕ್ಟರ್ ನಡುವೆ ಜಗಳವಾಗಿದ್ದು, ಈ ವೇಳೆ ಕಂಡಕ್ಟರ್​ ರಮೇಶ್ ಬಸ್ ಚಲಾಯಿಸಿದ್ದಾನೆ. ಆಗ ಬಸ್ ನಿಯಂತ್ರಣ ತಪ್ಪಿ, ಫುಟ್‍ಪಾತ್ ಏರಿ ಕ್ಯಾಂಟೀನ್​​ಗೆ ಡಿಕ್ಕಿಯಾಗಿದೆ. ಬಸ್ ಗುದ್ದಿದ ರಭಸಕ್ಕೆ ರಸ್ತೆ ಪಕ್ಕದಲ್ಲಿ ನಿಂತಿದ್ದ ಮಹಿಳೆ ಸಾವನ್ನಪ್ಪಿದ್ದಾರೆ.

ಪೀಣ್ಯ 2ನೇ ಹಂತದಿಂದ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಹೋಗುವ ಮಾರ್ಗ ಮಧ್ಯೆ ಘಟನೆ ಸಂಭವಿಸಿದ್ದು, ಬಸ್​ ಚಾಲಕ-ಕಂಡಕ್ಟರ್​ ಬೇಜಬ್ದಾರಿಯೇ ಈ ದುರಂತಕ್ಕೆ ಕಾರಣ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಇನ್ನು, ಅಪಘಾತದಲ್ಲಿ ಐದಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದೆ. ಸದ್ಯ ಓರ್ವ ಮಗುವಿನ ಸ್ಥಿತಿ  ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ : ಸಿದ್ದಾಪುರದಲ್ಲಿ ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ಯಶಸ್ವಿ!

Btv Kannada
Author: Btv Kannada

Read More