ಬೆಂಗಳೂರು : ತಾಯಿ ಮಗಳ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿ ತಾಯಿ ಹಾಗೂ ಮಗಳು ಪರಸ್ಪರ ಚಾಕುವಿನಿಂದ ಇರಿದುಕೊಂಡ ಘಟನೆ ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಾಹಿತಿ (18) ತಾಯಿಯಿಂದಲೇ ಕೊಲೆಯಾದ ಮಗಳು.
ಪಿಯು ಫಲಿತಾಂಶದ ವಿಚಾರವಾಗಿ ತಾಯಿ ಮತ್ತು ಮಗಳ ನಡುವೆ ಆಗಾಗ ಜಗಳ ನಡೀತಿತ್ತು. ಮಗಳ ರಿಸಲ್ಟ್ ತೃಪ್ತಿಯಾಗಿಲ್ಲ ಎಂದು ನಿನ್ನೆ ರಾತ್ರಿಯೂ ತಾಯಿ ಮಗಳ ನಡುವೆ ಜಗಳ ನಡೆದಿದೆ. ಹೀಗೆ ನಿನ್ನೆ 7.30ರ ಸುಮಾರಿಗೆ ತಾಯಿ ಮಗಳ ಮಧ್ಯೆ ಜಗಳ ಶುರುವಾಗಿದ್ದು, ಈ ಜಗಳ ವಿಕೋಪಕ್ಕೆ ತಿರುಗಿ ಪರಸ್ಪರ ತಾಯಿ ಹಾಗೂ ಮಗಳ ಚಾಕುವಿನಿಂದ ಇರಿದು ಕೊಂಡಿದ್ದಾರೆ. ಪರಿಣಾಮ ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ತಾಯಿಗೆ ನಾಲ್ಕೈದು ಕಡೆ ಗಾಯವಾಗಿದೆ.
ಸದ್ಯ ತಾಯಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಾಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ದಕ್ಷಿಣ ವಿಭಾಗ ಡಿಸಿಪಿ ಲೋಕೇಶ್ ಬಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಸಂಬಂಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಫೋಕ್ಸೋ ಪ್ರಕರಣ : ಮೇ.27 ರವರೆಗೆ ಮುರುಘಾ ಶ್ರೀಗೆ ನ್ಯಾಯಾಂಗ ಬಂಧನ..!