ಬೆಂಗಳೂರು : ಲೋಕಾಯುಕ್ತ ಅಧಿಕಾರಿಗಳ ಹೆಸರಲ್ಲಿ ಕೋಟಿ ಕೋಟಿ ಹಣ ವಸೂಲಿ ಮಾಡಿರುವ ಪ್ರಕರಣ ಸಂಬಂಧ ಶ್ರೀನಾಥ್ ಜೋಶಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇದೀಗ ಲೋಕಾಯುಕ್ತ ವಿಶೇಷ ನ್ಯಾಯಾಲಯ IPS ಅಧಿಕಾರಿ ಶ್ರೀನಾಥ್ ಜೋಶಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಮಾಡಿದೆ.
ಈ ಪ್ರಕರಣ ಸಂಬಂಧ ಮಂಗಳವಾರ ವಿಚಾರಣೆ ಹಾಜರಾಗುವಂತೆ ಶ್ರೀನಾಥ್ ಜೋಶಿ ಅವರಿಗೆ ತನಿಖಾಧಿಕಾರಿಯಾಗಿರುವ ಡಿವೈಎಸ್ಪಿ ತಿಪ್ಪೇಸ್ವಾಮಿ ಅವರು ನೋಟಿಸ್ ಜಾರಿ ಮಾಡಿದ್ದರು. ಇದರಂತೆ, ಮಂಗಳವಾರ ಬೆಳಗ್ಗೆ ಜೋಶಿ ಹಾಜರಾಗಿ ಸುಮಾರು 5 ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದರು.
ಲೋಕಾಯುಕ್ತ ಎಸ್ಪಿ-1 ಆಗಿ ಕಾರ್ಯ ನಿರ್ವಹಣೆ ವೇಳೆ ಶ್ರೀನಾಥ್ ಜೋಶಿ ಅವರು ಬಳಸುತ್ತಿದ್ದ ಎರಡು ಮೊಬೈಲ್ಗಳನ್ನು ಲೋಕಾಯುಕ್ತ ತನಿಖಾಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ಧರು. ಮೊಬೈಲ್ ಪರಿಶೀಲನೆ ವೇಳೆ ಕೆಲ ಫೋಟೊ ಹಾಗೂ ವಾಟ್ಸ್ಆ್ಯಪ್ ಸಂದೇಶಗಳು ಡಿಲೀಟ್ ಆಗಿರುವುದು ಕಂಡುಬಂದಿತ್ತು.
ಇದನ್ನೂ ಓದಿ : MLA ಬೈರತಿ ಬಸವರಾಜ್ಗೆ ಹಿನ್ನಡೆ – ಬಿಕ್ಲು ಶಿವ ಕೇಸ್ನ ವಿಚಾರಣೆಗೆ ಹಾಜರಾಗುವಂತೆ ಹೈಕೋರ್ಟ್ ಸೂಚನೆ!







