ಅಸ್ಸಾಂ : ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಕ್ಷಣ ಕ್ಷಣಕ್ಕೂ ಸ್ಫೋಟಕ ತಿರುವು ಸಿಗುತ್ತಿದೆ. ಅದರಲ್ಲೂ ಕರ್ನಾಟಕದಲ್ಲಿ 2024ರ ಲೋಕಸಭೆ ಚುನಾವಣೆಗಿಂತ ಹೆಚ್ಚಾಗಿ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣದ ಬಗ್ಗೆಯೇ ಚರ್ಚೆ ಆಗುತ್ತಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಕ್ರಿಯಿಸಿದ್ದಾರೆ.
ಈ ಬಗ್ಗೆ ಅಸ್ಸಾಂನ ಗುವಾಹಟಿಯಲ್ಲಿ ಹೇಳಿಕೆ ನೀಡಿದ ಅಮಿತ್ ಶಾ ಅವರು, ಪ್ರಜ್ವಲ್ ರೇವಣ್ಣ ಮಾಡಿದ್ದು ಘೋರ ಅನ್ಯಾಯ. ಯಾವುದೇ ಕಾರಣಕ್ಕೂ ಇದನ್ನು ನಾವು ಸಹಿಸಲ್ಲ. ಜೆಡಿಎಸ್ ಇವತ್ತೇ ಪ್ರಜ್ವಲ್ ಮೇಲೆ ಕ್ರಮ ಕೈಗೊಳ್ಳುತ್ತೆ ಎಂದು ಪ್ರಜ್ವಲ್ ಪೆನ್ಡ್ರೈವ್ ಪ್ರಕರಣ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ನಿಲುವು ಅತ್ಯಂತ ಸ್ಪಷ್ಟವಾಗಿದೆ. ಮಹಿಳೆಯರಿಗೆ ಆದ ಅಪಮಾನವನ್ನು ನಾವು ಸಹಿಸಲ್ಲ. ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ತನಿಖೆ ಆಗಲಿ. ಗಂಭೀರವಾದ ಕ್ರಮ ಕೈಗೊಳ್ಳಲು ನಮ್ಮ ಅಭ್ಯಂತ್ರ ಇಲ್ಲವೇ ಇಲ್ಲ. ಪ್ರಜ್ವಲ್ ವಿಡಿಯೋಗಳ ಬಗ್ಗೆ ಸರ್ಕಾರಕ್ಕೆ ಗೊತ್ತಿತ್ತು. ಸಿಎಂ, ಡಿಸಿಎಂ ಇಬ್ಬರಿಗೂ ಈ ಬಗ್ಗೆ ಗೊತ್ತಿತ್ತು. ತನಿಖೆ ಮಾಡದೇ ಸುಮ್ಮನೇ ಇದ್ದದ್ದು ಯಾಕೆ..?ಎಲೆಕ್ಷನ್ ಹೊತ್ತಲ್ಲೇ ಯಾಕೆ ಇದನ್ನು ದೊಡ್ಡ ಮಾಡಿಸಿದ್ರು. ಕಾಂಗ್ರೆಸ್ ಸರ್ಕಾರವೇ ಇದೆ.. ಬೇಗ ತನಿಖೆ ಮಾಡಿಸಲಿ. ತಕ್ಕ ಶಿಕ್ಷೆ ಕೊಡಿಸಲಿ, ನಮ್ಮ ಅಭ್ಯಂತರ ಇಲ್ಲವೇ ಇಲ್ಲ ಎಂದು ಅಮಿತ್ ಶಾ ತಿಳಿಸಿದ್ದಾರೆ.
ಇದನ್ನೂ ಓದಿ : ಮೋದಿ ನಂತರ ನಾಳೆ ಉತ್ತರಕ್ಕೆ ಅಮಿತ್ ಶಾ ಎಂಟ್ರಿ – ಪ್ರಹ್ಲಾದ್ ಜೋಶಿ, ಬೊಮ್ಮಾಯಿ ಪರ ಮತಬೇಟೆ..!