Download Our App

Follow us

Home » ರಾಜಕೀಯ » ರೇವಣ್ಣ ಇವತ್ತು ತನಿಖಾಧಿಕಾರಿಗಳ ಮುಂದೆ ಹಾಜರಾಗದಿದ್ರೆ ಅವರನ್ನು ಬಂಧಿಸಲೇಬೇಕಾಗುತ್ತೆ : ಡಾ.ಜಿ ಪರಮೇಶ್ವರ್..!

ರೇವಣ್ಣ ಇವತ್ತು ತನಿಖಾಧಿಕಾರಿಗಳ ಮುಂದೆ ಹಾಜರಾಗದಿದ್ರೆ ಅವರನ್ನು ಬಂಧಿಸಲೇಬೇಕಾಗುತ್ತೆ : ಡಾ.ಜಿ ಪರಮೇಶ್ವರ್..!

ಕಲಬುರಗಿ : ಪ್ರಜ್ವಲ್​​ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ತಗೆದುಕೊಂಡಿದೆ, ನಮ್ಮ ಸರ್ಕಾರ ಯಾರನ್ನೂ ರಕ್ಷಣೆ ಮಾಡೋದೇ ಇಲ್ಲ. ಈಗಾಗಲೇ ಪ್ರಜ್ವಲ್​​ ರೇವಣ್ಣಗೆ ಲುಕ್​ಔಟ್ ನೋಟಿಸ್​ ನೀಡಲಾಗಿದೆ, ಪ್ರಜ್ವಲ್ ಪರ ವಕೀಲರು ಸಮಯ ಕೇಳಿದ್ದಾರೆ. ಇಂಥಾ ಪ್ರಕರಣಗಳಲ್ಲಿ ಕಾಲಾವಕಾಶ ಕೊಡಲು ಆಗೋದಿಲ್ಲ, ಹೀಗಾಗಿ ಅರೆಸ್ಟ್ ಮಾಡಲು SIT ಎಲ್ಲಾ ಕ್ರಮ ಕೈಗೊಳ್ಳಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಈ ಬಗ್ಗೆ ಕಲಬುರಗಿಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿ, ರೇವಣ್ಣ ಇವತ್ತು ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು. ಇವತ್ತು ಹಾಜರಾಗದೇ‌ ಇದ್ರೆ ರೇವಣ್ಣ ಅವರನ್ನು ಬಂಧಿಸಲೇಬೇಕಾಗುತ್ತೆ, ನಮ್ಮ ಸರ್ಕಾರ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ಈಗಾಗಲೇ ಇಬ್ಬರು ಮಹಿಳೆಯರು ದೂರು ದಾಖಲು ಮಾಡಿದ್ದಾರೆ ಎಂದಿದ್ದಾರೆ.

ಸಾವಿರಾರು ಮಹಿಳೆಯರು ವಿಡಿಯೋದಲ್ಲಿದ್ದಾರೆ, ಹೀಗಾಗಿ ಇದು ಗಂಭೀರ ಪ್ರಕರಣ, ಆ ಹೆಣ್ಣು ಮಕ್ಕಳ ಕುಟುಂಬದ ಬಗ್ಗೆಯೂ ಆಲೋಚನೆ ಮಾಡಬೇಕಾಗುತ್ತದೆ ಎಂದು ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಇದನ್ನೂ ಓದಿ : ಸಚಿವ ಜಮೀರ್ ಆಪ್ತ, ಕಾಂಗ್ರೆಸ್ ನಾಯಕನ ಮನೆ ಮೇಲೆ ಬೆಳ್ಳಂಬೆಳಗ್ಗೆ ಐಟಿ ರೇಡ್..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here