Download Our App

Follow us

Home » ಅಪರಾಧ » ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಅತ್ಯಾಚಾರಿ : ಕಾಲಿಗೆ ಗುಂಡು ಹಾರಿಸಿದ ಪೊಲೀಸರು..!

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಅತ್ಯಾಚಾರಿ : ಕಾಲಿಗೆ ಗುಂಡು ಹಾರಿಸಿದ ಪೊಲೀಸರು..!

ಹುಬ್ಬಳ್ಳಿ : ನೇಹಾ ಹತ್ಯೆ ಬೆನ್ನಲ್ಲೇ ಇದೀಗ ಹುಬ್ಬಳ್ಳಿಯಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ವೆಸಗಿದ್ದಕ್ಕೆ ಸದ್ದಾಂ ಹುಸೇನ್​​ನ್ನು ಪೊಲೀಸರು ಅರೆಸ್ಟ್ ಮಾಡಿದ್ದರು. ವಿಚಾರಣೆಗೆ ಕರೆದೊಯ್ಯುವ ವೇಳೆ ಎಸ್ಕೇಪ್​​​ಗೆ ಯತ್ನಿಸಿದ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.

19 ರ್ಷದ ಸದ್ದಾಂ ಹುಸೇನ್​​ ಎಂಬಾತನನ್ನು ಹುಬ್ಬಳ್ಳಿ ನವನಗರ ಠಾಣೆ ಪೊಲೀಸರು ಬಂಧಿಸಿದ್ದರು. ಈ ಪ್ರಕರಣದಲ್ಲಿ ಲವ್​ ಜಿಹಾದ್​ ಆರೋಪ ಕೂಡ ಕೇಳಿಬಂದಿದೆ. ಆರೋಪಿಯನ್ನು ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಅರೆಸ್ಟ್ ಮಾಡಲಾಗಿತ್ತು. ಆದರೆ ವಿಚಾರಣೆಗೆ ಕರೆದೊಯ್ಯುವ ವೇಳೆ ಆರೋಪಿ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸರು ಕಾಲಿಗೆ ಗುಂಡು ಹಾರಿಸಿದ್ದಾರೆ.

ಸಂತ್ರಸ್ತೆ ಗರ್ಭಿಣಿ ಎಂದು ತಿಳಿದಾಗ ಪೋಷಕರು ದೂರು ನೀಡಿದ್ದರು. ದೂರು ನೀಡಿದ್ದ ನಂತರ ಪೋಷಕರಿಗೆ ಆರೋಪಿ ಬೆದರಿಕೆ ಹಾಕಿದ್ದ ಆರೋಪ ಕೇಳಿಬಂದಿದೆ. ಬಲವಂತವಾಗಿ ಲೈಂಗಿಕ ಸಂಭೋಗ, ಜೀವ ಬೆದರಿಕೆ ಹಾಕಿರುವ ಆರೋಪ ವ್ಯಕ್ತವಾಗಿದೆ. ಈ ಬಗ್ಗೆ ಹು-ಧಾ ಪೋಲಿಸ್ ಕಮಿಷನರ್​ ರೇಣುಕಾ ಸುಕುಮಾರ ಮಾಹಿತಿ ನೀಡಿದ್ದಾರೆ. ಸದ್ದಾಂ ವಿರುದ್ಧ FIR ದಾಖಲು ಮಾಡುವಂತೆ ಸ್ಥಳೀಯರ ಪ್ರತಿಭಟನೆ ಮಾಡಿದ್ದಾರೆ. ಸ್ಥಳೀಯರು APMC ಪೊಲೀಸ್​ ಠಾಣೆ ಎದುರು ಪ್ರತಿಭಟನೆ ಮಾಡಿದ್ದು, ಈ ವೇಳೆ ಹಿಂದೂ ಸಂಘಟನೆಗಳು, ಬಿಜೆಪಿ ಕಾರ್ಯಕರ್ತರ ಸಾಥ್​​​ ನೀಡಿದ್ದಾರೆ.

ಇದನ್ನೂ ಓದಿ : ಹೊಸಕೋಟೆ : ಸಿಡಿಲ ಅಬ್ಬರಕ್ಕೆ 20 ಮೇಕೆ, ಓರ್ವ ಮಹಿಳೆ ಸಾ*ವು..!

Leave a Comment

DG Ad

RELATED LATEST NEWS

Top Headlines

ಕರ್ನಾಟಕ ಚಲನಚಿತ್ರ ವಸ್ತ್ರಾಲಂಕಾರ ಕಲಾವಿದರ ಸಂಘದ ನೂತನ ಕಛೇರಿ ಉದ್ಘಾಟಿಸಿದ ರಾಗಿಣಿ ದ್ವಿವೇದಿ..!

ಸ್ಯಾಂಡಲ್‌ವುಡ್ ಬ್ಯೂಟಿ ರಾಗಿಣಿ ದ್ವಿವೇದಿ ಅವರು ಕರ್ನಾಟಕ ರಾಜ್ಯ ಚಲನಚಿತ್ರ ವಸ್ತ್ರಾಲಂಕಾರ ಕಲಾವಿದರ ಸಂಘದ ನೂತನ ಕಛೇರಿಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಶಿವರಾಜ್, ಗೌರವಾಧ್ಯಕ್ಷರಾದ ರವಿಶಂಕರ್,

Live Cricket

Add Your Heading Text Here