ಬೆಂಗಳೂರು : ಮಹಿಳೆಯನ್ನು ಕಿಡ್ನಾಪ್ ಮಾಡಿದ ಆರೋಪದ ಮೇಲೆ ಹೆಚ್.ಡಿ.ರೇವಣ್ಣ ವಿರುದ್ದ ಕೆ. ಆರ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಬಂಧನ ಭೀತಿಯಿಂದ ಪಾರಾಗಲು ಮಾಜಿ ಸಚಿವ ಹೆಚ್.ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಆದರೆ ಕಿಡ್ನಾಪ್ ಪ್ರಕರಣದಲ್ಲಿ ಮಾಜಿ ಸಚಿವ ರೇವಣ್ಣ ಸಲ್ಲಿಸಿರುವ ನಿರೀಕ್ಷಣಾ ಅರ್ಜಿ ವಿಚಾರಣೆಯನ್ನು ವಿಶೇಷ ಕೋರ್ಟ್ ಮುಂದೂಡಿದೆ. ಮಧ್ಯಾಹ್ನ 2.45ಕ್ಕೆ ಮುಂದೂಡಿ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣ ಸಲ್ಲಿಸಿರುವ ನಿರೀಕ್ಷಣಾ ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಡೆಸುತ್ತಿದೆ. ಆದರೆ SIT ಪರ ವಕೀಲ ಬಿ.ಎಂ.ಜಗದೀಶ್ ಅವರು
ಇನ್ನಷ್ಟು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಿ ಎಂದು ಮನವಿ ಮಾಡಿ್ದರು. ಹಿನ್ನಲೆಯಲ್ಲಿ ವಿಚಾರಣೆಯನ್ನು ಮಧ್ಯಾಹ್ನ 2.45ಕ್ಕೆ ಮುಂದೂಡಲಾಗಿದೆ.
ಇದನ್ನೂ ಓದಿ : ಪ್ರಜ್ವಲ್ ರೇವಣ್ಣ ಇವತ್ತಲ್ಲಾ ನಾಳೆ ಬರಲೇಬೇಕು – ಡಾ.ಜಿ.ಪರಮೇಶ್ವರ್..!