ಮೈಸೂರು : ಜೆಡಿಎಸ್ನ ಯಾವ ಶಾಸಕರಿಗೂ ಅಸಮಾಧಾನ ಇಲ್ಲ. ಜೆಡಿಎಸ್ನ 19 ಶಾಸಕರೂ ಒಟ್ಟಾಗಿದ್ದೇವೆ. ಯಾರೂ ಕಾಂಗ್ರೆಸ್ ಸೇರುವ ಬಗ್ಗೆ ಚರ್ಚೆಯನ್ನೇ ಮಾಡಿಲ್ಲ. ಜೆಡಿಎಸ್ನ 12 ಶಾಸಕರ ಕಾಂಗ್ರೆಸ್ ಸೇರ್ಪಡೆ ಕೇವಲ ವದಂತಿ ಅಷ್ಟೇ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿಕೆ ನೀಡಿದ್ದಾರೆ.
ಜೆಡಿಎಸ್ನ 12 ಶಾಸಕರು ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ ಎಂಬ ಸುದ್ದಿಗೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಅವರು, ಕಾಂಗ್ರಸ್ ಬಿರುಗಾಳಿಯಲ್ಲೇ ನಾವು ಗೆದ್ದು ಬಂದಿದ್ದೇವೆ.
ಎಲೆಕ್ಷನ್ ಸಂದರ್ಭದಲ್ಲಿ ಇಂಥಾ ಸುದ್ದಿ ಹರಡುತ್ತಿದ್ದಾರೆ. ಪ್ರಜ್ವಲ್ ವಿರುದ್ಧ ಕ್ರಮ ಆಗಬೇಕು ಎಂದು ಮನವಿ ಮಾಡಿದ್ದೆವು. ಈಗಾಗಲೇ ಪ್ರಜ್ವಲ್ ಮೇಲೆ ಸಸ್ಪೆಂಡ್ ಕ್ರಮ ಆಗಿದೆ. ಎಲ್ಲಾ ಶಾಸಕರೂ ಒಂದಾಗಿದ್ದೇವೆ, ಕಾಂಗ್ರೆಸ್ ಸೇರ್ಪಡೆ ಸುಳ್ಳು. ನಾವು ಕಾಂಗ್ರೆಸ್ ಸೇರ್ಪಡೆ ಬಗ್ಗೆ ಚರ್ಚೆಯನ್ನು ಮಾಡೇ ಇಲ್ಲ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : ಮಾಜಿ ಸಚಿವ ರೇವಣ್ಣ ಬೇಲ್ ಅರ್ಜಿ ವಿಚಾರಣೆ ಮುಂದೂಡಿಕೆ..!
Post Views: 299