ಬೆಂಗಳೂರು : ಸಂತ್ರಸ್ತೆಯ ಕಿಡ್ನಾಪ್ ಪ್ರಕರಣ ಸಂಬಂಧ SIT ಅಧಿಕಾರಿಗಳು ಮಾಜಿ ಸಚಿವ ಹೆಚ್.ಡಿ.ರೇವಣ್ಣನನ್ನು ಅರೆಸ್ಟ್ ಮಾಡಿದ್ದಾರೆ. ಪ್ರಕರಣ ಸಂಬಂಧ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಪಡೆಯಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮೊರೆ ಹೋದರು. ವಾದ- ಪ್ರತಿವಾದ ಆಲಿಸಿದ ಕೋರ್ಟ್ ಜಾಮೀನು ಅರ್ಜಿ ನಿರಾಕರಿಸಿತು.
ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ರೇವಣ್ಣ ವಿರುದ್ಧ ಸಂತ್ರಸ್ತೆ ಮಗ ದೂರು ದಾಖಲಿಸಿದ್ದರು. ಸಂತ್ರಸ್ತೆ ಪುತ್ರ, ರೇವಣ್ಣ ಹಾಗೂ ಸತೀಶ್ ಬಾಬಣ್ಣ ವಿರುದ್ಧ ದೂರು ದಾಖಲಿಸಿದ್ದರು. ಪ್ರಕರಣ ಸಂಬಂಧ ಈಗಾಗಲೇ ಎ2 ಆರೋಪಿ ಸತೀಶ್ ಬಾಬಣ್ಣನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಎ1 ಆರೋಪಿಯಾದ ಹೆಚ್.ಡಿ ರೇವಣ್ಣ ಕೋರ್ಟ್ ಮೊರೆ ಹೋಗಿದ್ದು, ಜನಪ್ರತಿನಿಧಗಳ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸಿ, ಅರ್ಜಿ ವಜಾಗೊಳಿಸಿದೆ.
ಬೇಲ್ ಅರ್ಜಿ ರಿಜೆಕ್ಟ್ ಆಗ್ತಿದ್ದಂತೆ SIT ರೇವಣ್ಣ ಬೆನ್ನುಬಿದ್ದು, ದೇವೇಗೌಡರ ಪದ್ಮನಾಭನಗರ ನಿವಾಸದಲ್ಲಿರುವ ಮಾಹಿತಿ ಪಡೆದುಕೊಂಡಿತು. ಕೂಡಲೇ 10 ಅಧಿಕಾರಿಗಳ ತಂಡ ದೇವೇಗೌಡರ ಮನೆಗೆ ಎಂಟ್ರಿ ಕೊಟ್ಟು, ರೇವಣ್ಣ ಅರೆಸ್ಟ್ ಮಾಡಿ CID ಕಚೇರಿಗೆ ಕರೆ ತಂದಿದ್ದರು. ನಂತರ ರಾತ್ರಿ 9 ಗಂಟೆ ಸುಮಾರಿಗೆ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದು ಮೆಡಿಕಲ್ ಟೆಸ್ಟ್ ಮಾಡಿದ್ದಾರೆ. ರಕ್ತದೊತ್ತಡ, ಶುಗರ್ ಸೇರಿ ಹಲವು ಪರೀಕ್ಷೆ ನಡೆಸಲಾಯ್ತು.
ರೇವಣ್ಣ ರಾತ್ರಿಯಿಡೀ SIT ಕಚೇರಿಯಲ್ಲೇ ಭಾರೀ ಒತ್ತಡದಲ್ಲಿದ್ದರು. ವೈದ್ಯಕೀಯ ತಪಾಸಣೆ ನಂತರ ರೇವಣ್ಣ ತಡರಾತ್ರಿಯಲ್ಲಿ ಆಸ್ಪತ್ರೆಯಿಂದ SIT ಕಚೇರಿಗೆ ಶಿಫ್ಟ್ ಆಗಿದ್ದಾರೆ.
ಇದನ್ನೂ ಓದಿ : ಕಿರುತೆರೆ ವೀಕ್ಷಕರಿಗೆ ಗುಡ್ ನ್ಯೂಸ್ : ಸ್ಟಾರ್ ಸುವರ್ಣದಲ್ಲಿ ಬರ್ತಿದೆ ಹೊಸ ಧಾರಾವಾಹಿ “ಜಾನಕಿ ಸಂಸಾರ”..!