ಮಡಿಕೇರಿ : SSLC ವಿದ್ಯಾರ್ಥಿನಿ ಮೀನಾಳನ್ನು ಹತ್ಯೆ ಮಾಡಿದ ಆರೋಪಿ ಪ್ರಕಾಶ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸೂರ್ಲಬ್ಬಿ ಗ್ರಾಮದ ಹಮ್ಮಿಯಾಲದಲ್ಲಿ ಪ್ರಕಾಶ್ ಮೃತದೇಹ ಪತ್ತೆಯಾಗಿದೆ.
ಸೋಮವಾರಪೇಟೆ ತಾಲ್ಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ಮೀನಾ ಮನೆಯಿಂದ 3 ಕಿ.ಮೀ ದೂರದಲ್ಲಿ ಹಮ್ಮಿಯಾಲ ಎಂಬ ಗ್ರಾಮವಿದ್ದು, ಮೀನಾ ಹತ್ಯೆ ಬಳಿಕ ಪ್ರಕಾಶ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರ ಶೋಧಕಾರ್ಯ ಸಂದರ್ಭದಲ್ಲಿ ಆರೋಪಿ ಪ್ರಕಾಶ್ ಮೃತದೇಹ ಪತ್ತೆಯಾಗಿದೆ.
ಅಪ್ರಾಪ್ತ ಬಾಲಕಿಯ ವಿವಾಹ ಮಾಡುವುದಕ್ಕೆ ಪೋಷಕರು ಸಿದ್ಧತೆ ನಡೆಸಿದ್ರು. ಈ ವಿಷಯ ಗ್ರಾಮಸ್ಥರ ಗಮನಕ್ಕೆ ಬಂದಿತ್ತು. ಹೀಗಾಗಿ ನಿನ್ನೆ ಸೋಮವಾರಪೇಟೆ ಪೊಲೀಸರ ಮದ್ಯಸ್ಥಿಕೆಯಿಂದ ಅಪ್ರಾಪ್ತ ಬಾಲಕಿಯ ನಿಶ್ಚಿತಾರ್ಥ ತಡೆದಿದ್ದಾರೆ. ಈ ವಿಚಾರ ತಿಳಿದು ನಿಶ್ಚಿತಾರ್ಥ ತಪ್ಪಿದ್ದಕ್ಕೆ ಮೀನಾಳನ್ನು ಆರೋಪಿ ಪ್ರಕಾಶ್ ಕೊಲೆ ಮಾಡಿದ್ದಾನೆ.
ಇದನ್ನೂ ಓದಿ : ಜೂನ್ 4ರ ನಂತ್ರ ಕಾಂಗ್ರೆಸ್ ಸರ್ಕಾರ ಇರಲ್ಲ : ಸ್ಫೋಟಕ ಭವಿಷ್ಯ ನುಡಿದ ಆರ್.ಅಶೋಕ್..!
Post Views: 1,041