ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದೆ ಎನ್ನಲಾದ ಅಶ್ಲೀಲ ವಿಡಿಯೋಗಳಿರುವ ಪೆನ್ಡ್ರೈವ್ ಪ್ರಕರಣವು ದೇಶಾದ್ಯಂತ ಸದ್ದು ಮಾಡುತ್ತಿದೆ. ಇದೀಗ ಪ್ರಜ್ವಲ್ ರೇವಣ್ಣ ಅವರನ್ನು ಹುಡುಕಿಕೊಟ್ಟರೆ 1 ಲಕ್ಷ ಬಹುಮಾನ ನೀಡುವುದಾಗಿ ಜನತಾ ಪಕ್ಷ ಘೋಷಣೆ ಮಾಡಿದೆ.
ಮಹಿಳೆಯರ ಮೇಲಿನ ಲೈಂಗಿಕ-ಮಾನಸಿಕ ದೌರ್ಜನ್ಯ ಹಾಗೂ ಪೆನ್ಡ್ರೈವ್ ಹಗರಣಕ್ಕೆ ಸಂಬಂಧಿಸಿದಂತೆ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ಬಗ್ಗೆ SIT ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಆದರೆ ಪ್ರಜ್ವಲ್ ಇನ್ನೂ ಪತ್ತೆಯಾಗಿಲ್ಲ.
ಹೀಗಿರುವಾಗಲೇ ಭರ್ಜರಿ ಆಫರ್ ನೀಡಿದ ಜನತಾ ಪಕ್ಷ ಪ್ರಜ್ವಲ್ ಹುಡುಕಿಕೊಡಿ, 1 ಲಕ್ಷ ಗೆಲ್ಲಿ ಎಂದು ಶಿವಾನಂದ ಸರ್ಕಲ್ನಲ್ಲಿ ಪೋಸ್ಟರ್ ಅಂಟಿಸಿದೆ. ಈ ಪೋಸ್ಟರ್ನಲ್ಲಿ ಪೆನ್ಡ್ರೈವ್ ಕೇಸ್ನ ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ. ಮಹಿಳಾ ದೌರ್ಜನ್ಯ ಕೇಸ್ನಲ್ಲಿ ಪ್ರಜ್ವಲ್ ನಾಪತ್ತೆಯಾಗಿದ್ದಾನೆ. ಪ್ರಜ್ವಲ್ ರೇವಣ್ಣ ಹುಡುಕಿ ಕೊಟ್ಟವರಿಗೆ 1 ಲಕ್ಷ ಬಹುಮಾನ ಕೊಡ್ತೇವೆ ಎಂದು ಬರೆದಿದೆ.
ಇದನ್ನೂ ಓದಿ : ಬಾಲಕಿಯ ರುಂಡ ಕತ್ತರಿಸಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಭೀಕರ ಹ*ತ್ಯೆ ಮಾಡಿದ್ದ ಆರೋಪಿ ಅರೆಸ್ಟ್..!