ಬೆಂಗಳೂರು : ಕೆಎಎಸ್ ಅಧಿಕಾರಿ ಪತ್ನಿಯೂ ಆಗಿರುವ ಹೈಕೋರ್ಟ್ ವಕೀಲರಾದ ಚೈತ್ರಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಸಂಜಯ್ನಗರ ನಿವಾಸದಲ್ಲಿ ನಡೆದಿದೆ.
ಮೃತ ಚೈತ್ರಾ ವೃತ್ತಿಯಲ್ಲಿ ವಕೀಲರಾಗಿದ್ದು, ಮಾಡಲಿಂಗ್ ಮತ್ತು ಕ್ರೀಡೆಯಲ್ಲಿ ಗುರುತಿಸಿಕೊಂಡಿದ್ದರು. 2016ರಲ್ಲಿ KAS ಅಧಿಕಾರಿ ಶಿವಕುಮಾರನ್ನು ಮದುವೆಯಾಗಿದ್ದರು. ಆದರೆ ಇಂದು ಚೈತ್ರಾ ಶವ ಬೆಡ್ರೂಂನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈಗಾಗಲೇ ಚೈತ್ರಾ ಮೃತದೇಹವನ್ನು M.S.ರಾಮಯ್ಯ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಈ ಸಂಬಂಧ ಮೃತ ಚೈತ್ರಾ ಸಹೋದರ ಕೊಟ್ಟ ದೂರಿನ ಆಧಾರದ ಮೇಲೆ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ಮೇರೆಗೆ ಪೊಲೀಸರು ತನಿಖೆ ಮುಂದುವರಿಸಿದ್ದು, ಚೈತ್ರಾ ಕುಟುಂಬಸ್ಥರು ಶಿವಕುಮಾರ್ ಮೇಲೆ ಆರೋಪ ಮಾಡಿದ್ದಾರೆ.
ಇದನ್ನೂ ಓದಿ : ಕೋಲಾರದಲ್ಲಿ ಹೆಣ್ಣು ಭ್ರೂಣ ಹ*ತ್ಯೆ – ಮಾಲೂರಿನ ಖಾಸಗಿ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ..!
Post Views: 285