ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಇವತ್ತು ಭಯಾನಕ ಘಟನೆ ನಡೆದಿದೆ. ಮನೆ ಮುಂದೆ ಆಟವಾಡುತ್ತಿದ್ದ ಮಗುವಿನ ಮೇಲೆ ಅಪ್ರಾಪ್ತ ಬಾಲಕ ಕಾರು ಹರಿಸಿದ ಘಟನೆ ಬೆಂಗಳೂರಿನ ಕಾಳಪ್ಪ ಲೇಔಟ್ನಲ್ಲಿ ನಡೆದಿದೆ. ಮಗುವಿನ ಮೇಲೆ ಕಾರು ಹರಿದ ಪರಿಣಾಮ 4 ವರ್ಷದ ಮಗುವಿನ ದೇಹ ಛಿದ್ರ, ಛಿದ್ರವಾಗಿದೆ. 4 ವರ್ಷದ ಆರವ್ ಮೃತ ಬಾಲಕ.
ಮೃತ ಆರವ್ ಬೆಳಗ್ಗೆ 10.30ರ ಸುಮಾರಿಗೆ ಬೆಂಗಳೂರಿನ ಕಾಳಪ್ಪ ಲೇಔಟ್ನಲ್ಲಿ ಮನೆ ಮುಂದೆ ಆಟವಾಡುತ್ತಿದ್ದ. ಈ ವೇಳೆ ಚಿವರಲೆಟ್ ಎಂಜಾಯ್ ಕಾರು ಓಡಿಸುತ್ತಿದ್ದ ಪೊಲೀಸ್ ಅಧಿಕಾರಿಯ ಅಪ್ತಾಪ್ತ ಪುತ್ರ ಮಗುವಿನ ಮೇಲೆ ಕಾರು ಹತ್ತಿಸಿದ್ದಾನೆ. ಅಪ್ತಾಪ್ತ ಬಾಲಕನ ನಿರ್ಲಕ್ಷ್ಯತಕ್ಕೆ 4 ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿದೆ.
ಮಗುವಿನ ಮೃತದೇಹವನ್ನು ಮಣಿಪಾಲ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಆಸ್ಪತ್ರೆಯ ಆವರಣದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮಗುವಿನ ಮೇಲೆ ಕಾರು ಹರಿಸಿದ ಅಪ್ರಾಪ್ತ ಬಾಲಕನನ್ನು ಜೀವನ್ ಭೀಮಾನಗರ ಪೊಲೀಸರು ಬಂಧಿಸಿದ್ದಾರೆ.
ಇನ್ನು ಚಿವರಲೆಟ್ ಎಂಜಾಯ್ ಕಾರ್ನಲ್ಲಿ ಪೊಲೀಸ್ ಬೋರ್ಡ್ ಇದ್ದು, ಪೊಲೀಸ್ ಅಧಿಕಾರಿಯ ಅಪ್ತಾಪ್ತ ಪುತ್ರನಿಂದ ಈ ಅಪಘಾತ ನಡೆದಿದೆ ಎಂದು ತಿಳಿದು ಬಂದಿದೆ. ಈ ಘಟನೆಯ ಸಂಬಂಧ ಪೊಲೀಸರು ವಾಹನದ ಮಾಲೀಕನ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ : ತುಮಕೂರಿನಲ್ಲಿ ಡೆಡ್ಲಿ ಆ್ಯಕ್ಸಿಡೆಂಟ್ – ಇಬ್ಬರು ಸ್ಥಳದಲ್ಲೇ ಸಾ*ವು..!