ಮಂಡ್ಯ : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ರಾಜಕೀಯ ನಾಯಕರು ಪರಸ್ಪರ ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿದ್ದಾರೆ. ಹೀಗಿರುವಾಗಲೇ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಏನ್ ಸಾಚನಾ? ಎಂದು ಏಕವಚನದಲ್ಲೇ ಕುಮಾರಸ್ವಾಮಿ ವಿರುದ್ಧ ಶಾಸಕ ಕದಲೂರು ಉದಯ್ ಕಿಡಿಕಾರಿದ್ದಾರೆ.
ಮಂಡ್ಯದಲ್ಲಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಶಾಸಕ ಕದಲೂರು ಉದಯ್ ವಾಗ್ದಾಳಿ ನಡೆಸಿ, ಕುಮಾರಸ್ವಾಮಿ ಒಬ್ಬ ನೀಚ. ಸಿಎಂ ಆಗಿದ್ದವರು ಇಂತಹ ನೀಚ ಕೆಲಸ ಮಾಡ್ತಾರಾ ಜೀವನದುದ್ದಕ್ಲೂ ಬ್ಲಾಕ್ಮೇಲ್, ಅಪಪ್ರಚಾರ ಮಾಡುತ್ತಾ ಬಂದಿದ್ದಾರೆ. ಬೇರೆಯವರನ್ನ ಮುಳುಗಿಸಿದ್ದೆ ಕುಮಾರಸ್ವಾಮಿ ಸಾಧನೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಇವರ ಮನೆಯ ಹೆಣ್ಮಕ್ಕಳ ಮರ್ಯಾದೆ ಹೋಗಿದ್ರೆ ಪ್ರತಿಭಟನೆ ಮಾಡ್ತಿದ್ರಾ? ಕಾಲ ಬದಲಾಗಿದೆ ನಿಮ್ಮ ದಬ್ಬಾಳಿಕೆ ನಡೆಯಲ್ಲ.ಕುಮಾರಸ್ವಾಮಿ ಜನರ ಮುಂದೆ ಕ್ಷಮೆ ಕೇಳಬೇಕು ಎಂದು ಕಿಡಿಕಾರಿದ್ದಾರೆ.
ಇದೇ ವೇಳೆ ಪ್ರಜ್ವಲ್ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣನೇ ವಿಡಿಯೋ ಮಾಡಿಕೊಂಡಿದ್ದು. ಇನ್ನೇನು ಪ್ರಜ್ವಲ್ ವಿಡಿಯೋ ಸರ್ಕಾರ ಮಾಡಿಸಿತ್ತಾ ಅಂತಾ MLA ಕದಲೂರು ಪ್ರಶ್ನೆ ಮಾಡಿದ್ದಾರೆ.
ಜೆಡಿಎಸ್ ಒಂದು ಕುಟುಂಬಕ್ಕೆ ಸೀಮಿತವಾದ ಪಕ್ಷ. ಯಾವ ಪುರುಷಾರ್ಥಕ್ಕೆ ಜೆಡಿಎಸ್ ಪ್ರೊಟೆಸ್ಟ್ ಮಾಡ್ತಿದ್ದಾರೆ. ಕಾರ್ಯಕರ್ತರನ್ನು ಎತ್ತಿಕಟ್ಟಿ ಪ್ರತಿಭಟನೆ ಮಾಡಿಸುತ್ತಿದ್ದಾರೆ. ಸಂತ್ರಸ್ತೆಯರ ಪರ ಯಾವ ಜೆಡಿಎಸ್ ನಾಯಕರು ಧ್ವನಿ ಎತ್ತಿಲ್ಲ. ಕಾಂಗ್ರೆಸ್ ಸರ್ಕಾರ ನೀಚ ಸರ್ಕಾರ ಅಂತಾರೆ. ಬಡವರಿಗೆ ಯೋಜನೆ ಕೊಟ್ಟ ಸರ್ಕಾರ ನೀಚ ಸರ್ಕಾರನಾ..? ಎಂದು ಮಂಡ್ಯದಲ್ಲಿ ಶಾಸಕ ಕದಲೂರು ಉದಯ್ ವಾಗ್ದಾಳಿ ನಡೆಸಿದ್ದಾರೆ.
ಇದನ್ನೂ ಓದಿ : ಅಪ್ರಾಪ್ತ ಬಾಲಕನ ಕೈಯಲ್ಲಿ ಕಾರು ಕೊಟ್ಟ ಪೊಲೀಸ್ ಅಧಿಕಾರಿ : ಕಾರು ಹರಿದು 4ವರ್ಷದ ಮಗು ಸಾ*ವು..!