ಬೆಂಗಳೂರು : ಸ್ಯಾಂಡಲ್ವುಡ್ ನಟ ಚೇತನ್ ಚಂದ್ರ ಅವರ ಮೇಲೆ ಗುಂಪೊಂದು ಅಟ್ಯಾಕ್ ಮಾಡಿ ಮಾರಣಾಂತಿಕವಾಗಿ ಹಲ್ಲೆ ಮಾಡಿದೆ. ಬೆಂಗಳೂರಿನ ಕಗ್ಗಲಿಪುರದ ಬಳಿ ಈ ಘಟನೆ ನಡೆದಿದ್ದು, ಸುಮಾರು 20 ಜನರು ಚೇತನ್ ಚಂದ್ರ ಅವರ ಕಾರನ್ನು ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆ.
ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಳ್ಳುವ ಮೂಲಕ ಚೇತನ್ ಚಂದ್ರ ಅವರು ಘಟನೆ ಬಗ್ಗೆ ವಿವರ ನೀಡಿದ್ದಾರೆ. ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆಯುವ ಸಂದರ್ಭದಲ್ಲಿ ಚೇತನ್ ಚಂದ್ರ ಅವರು ಇನ್ಸ್ಟಾಗ್ರಾಮ್ನಲ್ಲಿ ಹಲ್ಲೆ ಬಗ್ಗೆ ವಿವರಿಸಿದ್ದಾರೆ.
ನಿನ್ನೆ (ಮೇ 12) ನಟ ಚೇತನ್ ಅವರು ತಾಯಿಯನ್ನು ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ ವಾಪಸ್ ಬರುವಾಗ ಚೇತನ್ ಚಂದ್ರ ಅವರ ಮೇಲೆ ಕಿಡಿಗೇಡಿಗಳು ಹಲ್ಲೆ ಮಾಡಿದ್ದಾರೆ. ಚೇತನ್ ಚಂದ್ರ ಕಾರು ಬೈಕ್ಗೆ ಸ್ವಲ್ಪ ಟಚ್ ಆಗಿದ್ದಕ್ಕೆ ಈ ಹಲ್ಲೆ ನಡೆದಿದೆ. ಚೇತನ್ ಕಾರಿಗೂ ಹಾನಿ ಮಾಡಲಾಗಿದೆ.
https://www.instagram.com/reel/C638_oryw6Y/?utm_source=ig_web_copy_link
ಈ ಘಟನೆ ಯಾವ ರೀತಿ ನಡೆಯಿತು ಎಂದು ಇನ್ಸ್ಟಾಗ್ರಾಮ್ ನಲ್ಲಿ ಚೇತನ್ ಚಂದ್ರ ಅವರು ಮಾಹಿತಿ ನೀಡಿದ್ದಾರೆ. ‘ಇದು ನನ್ನ ಜೀವನದ ಅತಿ ಕೆಟ್ಟ ಅನುಭವ. ನ್ಯಾಯ ಬೇಕು’ ಎಂದು ಚೇತನ್ ಚಂದ್ರ ಹೇಳಿದ್ದಾರೆ. ‘ಇವತ್ತು ಒಂದು ಕೆಟ್ಟ ಘಟನೆಯಲ್ಲಿ ಸಿಕ್ಕಿ ಹಾಕಿಕೊಂಡೆ. ನನ್ನ ಗಾಡಿ ಅಡ್ಡ ಹಾಕಿ ಹೊಡೆದರು. ಚೆನ್ನಾಗಿ ಕುಡಿದು ನನ್ನ ಗಾಡಿ ಅಡ್ಡ ಹಾಕಿದ್ದಾರೆ. ಏನಿಲ್ಲ ಅಂದರೂ 20 ಜನರು ಸೇರಿಕೊಂಡು ನನಗೆ ಹೊಡೆದಿದ್ದಾರೆ. ಅದರ ವಿಡಿಯೋ ಇದೆ. ಮೂಗು ಮುರಿದು ಹಾಕಿದ್ದಾರೆ. ಕಗ್ಗಲಿಪುರ ಪೊಲೀಸ್ ಠಾಣೆ ಪಕ್ಕದಲ್ಲಿ ಪ್ರಥಮ ಚಿಕಿತ್ಸೆ ಪಡೆಯಲು ಬಂದಿದ್ದೇನೆ ಎಂದು ಚೇತನ್ ಚಂದ್ರ ಹೇಳಿದ್ದಾರೆ. ಇನ್ನು, ಹಲ್ಲೆಗೊಳಗಾದ ಬಳಿಕ ಅವರು ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಚೇತನ್ ದೂರು ನೀಡಿದ್ದಾರೆ.
ಇದನ್ನೂ ಓದಿ : ಲೋಕಸಭೆ ಚುನಾವಣೆ : ಇಂದು 4ನೇ ಹಂತ, 10 ರಾಜ್ಯ, 96 ಕ್ಷೇತ್ರಗಳಲ್ಲಿ ವೋಟಿಂಗ್..!