ಬೆಂಗಳೂರು : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದೇಶಾದ್ಯಂತ ಹಲ್ ಚಲ್ ಎಬ್ಬಿಸಿದೆ. ಪೆನ್ಡ್ರೈವ್ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಇಲ್ಲಿ ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಯಾಗಿದ್ರೂ ಪ್ರಜ್ವಲ್ ಬಂದು ಶರಣಾಗದೇ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ.
ಇನ್ನು, ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಿಗ್ಗೆ 11 ಗಂಟೆಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಲ್ಲಿ ನಡೆಯಲಿದೆ. ಜಾಮೀನು ಅರ್ಜಿ ವಿಚಾರಣೆ ಹೊತ್ತಲ್ಲೇ ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಕಿಡ್ನಾಪ್ ಸಂತ್ರಸ್ತೆಯ ವಿಡಿಯೋ ಸ್ಪೋಟವಾಗಿದ್ದು, ನನ್ನನ್ನು ಕಿಡ್ನಾಪ್ ಮಾಡಿಲ್ಲ ಎಂದು ಸಂತ್ರಸ್ತೆ ಹೇಳಿದ್ದಾರೆ. ಈ ಬೆಳವಣಿಗೆಯಿಂದ ಬೇಸತ್ತು ನಾನೇ ಹೋಗಿದ್ದೆ, ಮೊಬೈಲ್ ವಿಡಿಯೋಗೂ ನನಗೂ ಯಾವುದೇ ಸಂಬಂಧ ಇಲ್ಲ. ನನ್ನ ಮಗ ಗೊತ್ತಿಲ್ಲದೆ ಪೊಲೀಸರಿಗೆ ದೂರು ಕೊಟ್ಟಿದ್ದಾನೆ ಎಂದಿದ್ದಾರೆ.
ಹೊರಗಡೆ ಹೋಗಿದ್ದೀನಿ, ಶೀಘ್ರವೇ ವಾಪಸ್ ಬರ್ತಿನಿ. ಕೂಲಿ ಮಾಡಿ ಬದುಕುತ್ತಿದ್ದೀನಿ, ನಮಗೆ ಯಾವುದೇ ಹಿಂಸೆ ಕೊಡಬೇಡಿ. ನಮಗೆ ಏನಾದ್ರೂ ತೊಂದರೆ ಆದರೆ ನೀವೇ ಹೊಣೆ ಎಂದು ಸಂತ್ರಸ್ತೆ ಹೇಳಿರುವ ವಿಡಿಯೋ ವೈರಲ್ ಆಗಿದೆ.
ಪೊಲೀಸರು ರಕ್ಷಣೆ ಮಾಡಿ ಕರೆತರುವ ಮುನ್ನ ಸಂತ್ರಸ್ತೆ ನೀಡಿರುವ ಈ ಹೇಳಿಕೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಬೇಲ್ ಅರ್ಜಿ ವಿಚಾರಣೆ ವೇಳೆ ಸಂತ್ರಸ್ತೆಯ ವಿಡಿಯೋ ಪ್ರಸ್ತಾಪ ಮಾಡುವ ಸಾಧ್ಯತೆಯಿದೆ. ರೇವಣ್ಣ ಜಾಮೀನು ಅರ್ಜಿ ಏನಾಗಲಿದೆ ಎಂಬುದನ್ನು ಕಾದುನೋಡಬೇಕಿದೆ.
ಇದನ್ನೂ ಓದಿ : ಬೆಂಗಳೂರಿನಲ್ಲಿ ಸ್ಯಾಂಡಲ್ವುಡ್ ನಟ ಚೇತನ್ ಚಂದ್ರ ಮೇಲೆ ಮಾರಣಾಂತಿಕ ಹಲ್ಲೆ – ವಿಡಿಯೋ ವೈರಲ್..!