ಬೆಂಗಳೂರು : ಕೆ.ಆರ್.ನಗರ ಸಂತ್ರಸ್ತೆ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಹೊಸೂರು ಕೀರ್ತಿ ಎಂಬಾತ ಬಂಧಿತ ಆರೋಪಿ.
ಆರೋಪಿ ಕೀರ್ತಿಯನ್ನು ಪೊಲೀಸರು ಅರೆಸ್ಟ್ ಮಾಡಿ ಕೋರ್ಟ್ ಮುಂದೆ ಹಾಜರು ಪಡಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಾಧೀಶರು ಕೀರ್ತಿಯನ್ನು ನಾಲ್ಕು ದಿನ ಪೊಲೀಸ್ ಕಸ್ಟಡಿಗೆ ನೀಡಿದ್ದಾರೆ.
ಸಂತ್ರಸ್ತೆ ಕಿಡ್ನಾಪ್ ಕೇಸ್ಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಸತೀಶ್ ಬಾಬುರನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದರು. ಇದಾದ ಬಳಿಕ ಸಂತ್ರಸ್ತ ಮಹಿಳೆಯ ಕಿಡ್ನಾಪ್ಗೆ ಸಹಕರಿಸಿದ್ದರು ಎಂಬ ಆರೋಪದ ಮೇಲೆ SIT ಅಧಿಕಾರಿಗಳು ಮತ್ತೆ ನಾಲ್ವರನ್ನು ಬಂಧಿಸಿದ್ದರು. ಇನ್ನು ಸಂತ್ರಸ್ತೆ ನೀಡಿರುವ ಹೇಳಿಕೆಯಲ್ಲಿ ಭವಾನಿ ರೇವಣ್ಣರ ಹೆಸರು ಉಲ್ಲೇಖವಿದ್ದ ಕಾರಣ ಭವಾನಿ ಅವರಿಗೂ SIT ನೋಡಿಸ್ ನೀಡಿತ್ತು. ಇದೀಗ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ .
ಇದನ್ನೂ ಓದಿ : ಮಳೆಗಾಲದ ಆರಂಭದಲ್ಲೇ ಎಚ್ಚೆತ್ತ ಬಿಬಿಎಂಪಿ – ಶಿಥಿಲಾವಸ್ಥೆಯ ಕಟ್ಟಡಗಳ ತೆರವಿಗೆ BBMP ನೋಟಿಸ್..!