‘ಅಪಾಯವಿದೆ ಎಚ್ಚರಿಕೆ’ ಟ್ರೈಲರ್​ಗೆ ಮೆಚ್ಚುಗೆಯ ಮಹಾಪೂರ – ಫೆ.28ಕ್ಕೆ ರಾಜ್ಯಾದ್ಯಂತ ಸಿನಿಮಾ ತೆರೆಗೆ!

ಕನ್ನಡದಲ್ಲಿ ಕಂಟೆಂಟ್ ಓರಿಯಂಟೆಡ್ ಚಿತ್ರಗಳನ್ನು ಅಭಿಮಾನಿಗಳು ಸದಾ ಪ್ರೋತ್ಸಾಹಿಸುತ್ತಾ ಬಂದಿದ್ದಾರೆ. ಒಂದೊಳ್ಳೆ ಕಂಟೆಂಟ್​ನೊಂದಿಗೆ ಹಾರಾರ್ ಜಾನರ್​ನ ಕಥಾಹಂದರವನ್ನೂ ಹೊಂದಿರುವ “ಅಪಾಯವಿದೆ ಎಚ್ಚರಿಕೆ” ಚಿತ್ರದ ಟ್ರೈಲರ್​ಗೆ​ ಇತ್ತೀಚಿಗೆ ಬಿಡುಗಡೆಯಾಗಿದೆ.

“ಅಣ್ಣಯ್ಯ” ಧಾರಾವಾಹಿ ಮೂಲಕ ಜನಪ್ರಿಯರಾಗಿರುವ ವಿಕಾಶ್ ಉತ್ತಯ್ಯ ನಾಯಕರಾಗಿ ನಟಿಸಿರುವ ಈ ಚಿತ್ರವನ್ನು ಅಭಿಜಿತ್ ತೀರ್ಥಹಳ್ಳಿ ಬರೆದು ನಿರ್ದೇಶಿಸಿದ್ದಾರೆ. ಹಿರಿಯ ಚಲನಚಿತ್ರ ಪತ್ರಕರ್ತೆ ಸರಸ್ವತಿ ಜಾಗಿರದಾರ್, ಚಲನಚಿತ್ರ ಸ್ಥಿರ ಛಾಯಾಗ್ರಾಹಕರಾದ ಮನು,‌ ಮೋಕ್ಷೇಂದ್ರ ಈ ಚಿತ್ರದ ಟ್ರೈಲರ್​ ಬಿಡುಗಡೆ ಮಾಡಿದ್ದು, ಕನ್ನಡ ಚಲನಚಿತ್ರಗಳನ್ನು ಸದಾ ಪ್ರೋತ್ಸಾಹಿಸುತ್ತಾ ಬಂದಿರುವ ಕನ್ನಡಪರ ಹೋರಾಟಗಾರರು, ಕ್ಯಾಬ್ ಹಾಗೂ ಆಟೋ ಚಾಲಕರು, ಯವಕರು ಸೇರಿದಂತೆ ವಿವಿಧ ರೀತಿಯಲ್ಲಿ ಗುರುತಿಸಿಕೊಂಡಿರುವ ಗಣ್ಯರು ಟ್ರೈಲರ್​ಗ ಬಿಡುಗಡೆಗೆ ಸಾಥ್ ನೀಡಿ, ಚಿತ್ರ ಯಶಸ್ವಿಯಾಗಲೆಂದು ಹಾರೈಸಿದ್ದಾರೆ.

ಕನ್ನಡ ಚಿತ್ರರಂಗದ ವಿವಿಧ ಆಯಾಮಗಳಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡಿರುವ ನನಗೆ ನಿರ್ದೇಶಕನಾಗಿ ಇದು‌ ಮೊದಲ ಚಿತ್ರ ಎಂದು ಮಾತನಾಡಿದ ನಿರ್ದೇಶಕ ಅಭಿಜಿತ್ ತೀರ್ಥಹಳ್ಳಿ, ಇದು ಸಸ್ಪೆನ್ಸ್ ಥ್ರಿಲ್ಲರ್ ಚಿತ್ರವಾದರೂ ಹಾರಾರ್ ಕೂಡ ಗಮನ ಸೆಳೆಯುತ್ತದೆ. ನೀರು, ಬೆಂಕಿ, ಗಾಳಿ ಮೂರನ್ನು ಪ್ರತಿನಿಧಿಸುವ ಮೂರು ಪ್ರಮುಖಪಾತ್ರಗಳು ನಮ್ಮ‌ ಚಿತ್ರದಲ್ಲಿದೆ. ವಿಕಾಶ್ ಉತ್ತಯ್ಯ, ಮಿಥುನ್ ತೀರ್ಥಹಳ್ಳಿ, ರಾಘವ್ ಕೊಡಚಾದ್ರಿ ಈ ಮೂರು ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಟೀಸರ್ ಜೊತೆ ಚುರುಕು ನೋಟವೇ ಮತ್ತು ಬ್ಯಾಚುಲರ್ ಹಾಡುಗಳ ಮೂಲಕ ಜನರನ್ನು ತಲುಪಿರುವ ನಮ್ಮ ಚಿತ್ರದ ಟ್ರೈಲರ್​ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಆನಂದ್ ಆಡಿಯೋ ಯೂಟ್ಯೂಬ್ ಚಾನಲ್​ನಲ್ಲಿ ಟ್ರೈಲರ್ ಬಿಡುಗಡೆಯಾಗಿದ್ದು, ಫೆಬ್ರವರಿ 28ರಂದು ನಮ್ಮ ಚಿತ್ರ ರಾಜ್ಯಾದ್ಯಂತ ತೆರೆಗೆ ಬರುತ್ತಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ನಿರ್ಮಾಪಕರಾದ ಮಂಜುನಾಥ್.ವಿ.ಜಿ ಹಾಗೂ ಪೂರ್ಣಿಮಾ ಗೌಡ ಅವರು ಮಾತನಾಡಿ, ಚಿತ್ರತಂಡದ ಸಹಕಾರದಿಂದ ಒಂದೊಳ್ಳೆ ಸಿನಿಮಾ ಮಾಡಿದ್ದೇವೆ‌. ಈಗಾಗಲೇ ಟ್ರೇಲರ್ ಬಿಡುಗಡೆಯಾಗಿದ್ದು, ಹೊಸತಂಡದ ಹೊಸಪ್ರಯತ್ನಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದದಿದ್ದಾರೆ.

Btv Kannada
Author: Btv Kannada

Leave a Comment

Read More