ಬೆಳಗಾವಿ : ಟಿಕೆಟ್ ಕೇಳಿದಾಗ ಮುಸುಕುಧಾರಿಯೊಬ್ಬ ಐವರಿಗೆ ಚಾಕುವಿನಿಂದ ಇರಿದು ಪರಾರಿಯಾದ ಘಟನೆ ಪಾಂಡಿಚೇರಿ-ಮುಂಬೈ ಚಾಲುಕ್ಯ ಎಕ್ಸ್ಪ್ರೆಸ್ ರೈಲಿನಲ್ಲಿ ನಡೆದಿದೆ. ಘಟನೆಯಲ್ಲಿ ಝಾನ್ಸಿ ಮೂಲದ ಕೋಚ್ ಅಟೆಂಡರ್ ದೇವಋಷಿ ವರ್ಮಾ (23) ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಟಿಸಿ ಮೇಲಿನ ಹಲ್ಲೆ ತಡೆಯಲು ಹೋಗಿ ಕೋಚ್ ಅಟೆಂಡರ್ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಟ್ರೇನ್ ನಂಬರ್ 11006, ಎಸ್ 8 ಬೋಗಿಯಲ್ಲಿ ಮುಸುಕುಧಾರಿ ಚಾಕು ಇರಿದಿದ್ದು, ಬೆಳಗಾವಿಯ ಖಾನಾಪುರ ತಾಲೂಕಿನ ಲೊಂಡಾ ಬಳಿ ಈ ಘಟನೆ ನಡೆದಿದೆ. ಟಿಕೆಟ್ ಕೇಳಿದಾಗ ಚಾಕುವಿನಿಂದ ಇರಿದು ಆಗಂತುಕ ಪರಾರಿಯಾಗಿದ್ದಾನೆ. ನಾಲ್ವರು ಪ್ರಯಾಣಿಕರು ಸೇರಿ ಟಿಸಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ಅಪರಿಚಿತ ಮುಸುಕುಧಾರಿಯಿಂದ ಕೃತ್ಯ ನಡೆದಿದೆ.
ಕೃತ್ಯ ಎಸಗಿ ಅಪರಿಚಿತ ಮುಸುಕುಧಾರಿ ಪರಾರಿಯಾಗಿದ್ದು, ಗಾಯಗೊಂಡ ಟಿ.ಸಿ ಸೇರಿ ನಾಲ್ವರನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಚಾಲುಕ್ಯ ರೈಲು ಧಾರವಾಡದಿಂದ ಬೆಳಗಾವಿಯತ್ತ ಬರುತ್ತಿದ್ದ ವೇಳೆ ಘಟನೆ ನಡೆದಿದೆ. ಚಿಂತಾಜನಕ ಸ್ಥಿತಿಯಲ್ಲಿರುವ ನಾಲ್ವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ : ಚಿತ್ರದುರ್ಗ : ಪಾಳು ಬಿದ್ದ ಮನೆಯಲ್ಲಿ 5 ಅಸ್ಥಿಪಂಜರ ಪತ್ತೆ ಕೇಸ್ – FSL ರಿಪೋರ್ಟ್ನಲ್ಲಿ ಕೊನೆಗೂ ಸ್ಫೋಟಕ ಅಂಶ ಬಯಲು..!