Download Our App

Follow us

Home » ಸಿನಿಮಾ » ಕೈಗೆ ಬ್ಯಾಂಡೇಜ್​​ ಸುತ್ತಿಕೊಂಡೇ ರೆಡ್​ ಕಾರ್ಪೆಟ್​​ ಮೇಲೆ ಮಿಂಚಿದ ಐಶ್ವರ್ಯಾ – ರೈ ಆತ್ಮವಿಶ್ವಾಸಕ್ಕೆ ಫ್ಯಾನ್ಸ್​ ಮೆಚ್ಚುಗೆ..!

ಕೈಗೆ ಬ್ಯಾಂಡೇಜ್​​ ಸುತ್ತಿಕೊಂಡೇ ರೆಡ್​ ಕಾರ್ಪೆಟ್​​ ಮೇಲೆ ಮಿಂಚಿದ ಐಶ್ವರ್ಯಾ – ರೈ ಆತ್ಮವಿಶ್ವಾಸಕ್ಕೆ ಫ್ಯಾನ್ಸ್​ ಮೆಚ್ಚುಗೆ..!

ಬಿ ಟೌನ್ ಸುಂದರಿ, ನೀಲಿ ಕಣ್ಣಿನ ಚೆಲುವೆ ಐಶ್ವರ್ಯಾ ರೈ ಸಿನಿಮಾ ಮಾತ್ರವಲ್ಲದೇ ಮಾಡೆಲಿಂಗ್​ ಕ್ಷೇತ್ರದಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಜಾಗತಿಕ ಮಟ್ಟದ ಸೌಂದರ್ಯ ವರ್ಧಕ ಬ್ರ್ಯಾಂಡ್​ಗಳಿಗೆ ರಾಯಭಾರಿ ಆಗಿರುವ ಅವರು ಹಲವು ವರ್ಷಗಳಿಂದ ಕಾನ್​ ಚಿತ್ರೋತ್ಸವದ ರೆಡ್​ ಕಾರ್ಪೆಟ್​ ಮೇಲೆ ಹೆಜ್ಜೆ ಹಾಕುತ್ತಾ ಬಂದಿದ್ದಾರೆ. ಈ ಬಾರಿ ಕೂಡ ಅವರು ರೆಡ್​ ಕಾರ್ಪೆಟ್​ನಲ್ಲಿ ಮಿಂಚಿದ್ದಾರೆ.

ಅಚ್ಚರಿ ಏನೆಂದರೆ, ಕೈಗೆ ಬ್ಯಾಂಡೇಜ್​ ಸುತ್ತಿಕೊಂಡೇ ಅವರು ರೆಡ್​ ಕಾರ್ಪೆಟ್​ನಲ್ಲಿ ನಡೆದು ಬಂದಿದ್ದಾರೆ. ಅವರ ಫೋಟೋ ಮತ್ತು ವಿಡಿಯೋಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿವೆ. ಅವರ ಆತ್ಮವಿಶ್ವಾಸಕ್ಕೆ ಅಭಿಮಾನಿಗಳು ಭೇಷ್ ಎಂದಿದ್ದಾರೆ.

ಬುಧವಾರ (ಮೇ 15) ರಾತ್ರಿ ಐಶ್ವರ್ಯಾ ರೈ ಅವರು ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದರು. ಅವರ ಕೈಗೆ ಗಾಯ ಆಗಿದ್ದನ್ನು ನೋಡಿ ಫ್ಯಾನ್ಸ್​ಗೆ ಬೇಸರ ಆಗಿತ್ತು. ಕೈಗೆ ಪೆಟ್ಟಾಗಿರುವುದರಿಂದ ಈ ಬಾರಿ ಅವರು ಕಾನ್​ ಚಿತ್ರೋತ್ಸವದ ರೆಡ್​ ಕಾರ್ಪೆಟ್​ನಲ್ಲಿ ಹೆಜ್ಜೆ ಹಾಕುವುದು ಅನುಮಾನ ಎಂದು ಅನೇಕರು ಭಾವಿಸಿದ್ದರು. ಆದರೆ ಐಶ್ವರ್ಯಾ ರೈ ಅವರು ತಮ್ಮ ಬದ್ಧತೆ ತೋರಿಸಿದ್ದಾರೆ.

ಕೈಗೆ ಪೆಟ್ಟಾಗಿದೆ ಎಂಬ ನೆಪ ಹೇಳದೇ ಐಶ್ವರ್ಯಾ ರೈ ಅವರು ಕಾನ್​ ಫಿಲ್ಮ್ ಫೆಸ್ಟಿವಲ್​ನಲ್ಲಿ ಭಾಗಿ ಆಗಿದ್ದಾರೆ. ಕಪ್ಪು, ಬಿಳಿ ಮತ್ತು ಗೋಲ್ಡನ್​ ಬಣ್ಣಗಳಿಂದ ವಿನ್ಯಾಸಗೊಂಡ ಗೌನ್​ ಧರಿಸಿ ಅವರು ಮಿಂಚಿದ್ದಾರೆ. ಬಲಗೈನಲ್ಲಿ ಬ್ಯಾಂಡೇಜ್​ ಇದ್ದರೂ ಕೂಡ ಅವರು ಆ ಬಗ್ಗೆ ಹೆಚ್ಚು ಗಮನ ನೀಡಿಲ್ಲ. ಮೊದಲೇ ಒಪ್ಪಿಕೊಂಡ ಈ ಕೆಲಸವನ್ನು ಅವರು ಎಂದಿನ ಉತ್ಸಾಹದಲ್ಲಿ ಮಾಡಿ ಮುಗಿಸಿದ್ದಾರೆ. ಅವರ ಫೋಟೋಗಳಿಗೆ ಫ್ಯಾನ್ಸ್​ ಮೆಚ್ಚುಗೆ ಸೂಚಿಸಿದ್ದಾರೆ.

ಐಶ್ವರ್ಯಾ ರೈ ಬಚ್ಚನ್​ ಅವರಿಗೆ ಕಾನ್​ ಚಿತ್ರೋತ್ಸವ ಹೊಸದೇನೂ ಅಲ್ಲ. 2002ರಲ್ಲಿ ಅವರು ಮೊದಲ ಬಾರಿಗೆ ಕಾನ್ ಚಿತ್ರೋತ್ಸವದ ಕೆಂಪು ಹಾಸಿನ ಮೇಲೆ ಹೆಜ್ಜೆ ಹಾಕಿದ್ದರು. ಅಂದಿನಿಂದ ಇಂದಿನ ತನಕ ಅವರು ಪ್ರತಿ ವರ್ಷವೂ ಅಲ್ಲಿಗೆ ತೆರಳಿ ತಮ್ಮ ಹೆಜ್ಜೆ ಹಾಕಿದ್ದಾರೆ. ಈವರೆಗೂ 21 ಬಾರಿ ಅವರು ಕಾನ್​ ಫಿಲ್ಮ್​ ಫೆಸ್ಟಿವಲ್​ನ ರೆಡ್​ ಕಾರ್ಪೆಟ್​ನಲ್ಲಿ ವಾಕ್​ ಮಾಡಿದ್ದಾರೆ. ಈ ಬಾರಿ ಕೈಗೆ ಪೆಟ್ಟಾಗಿದ್ದನ್ನು ಕೂಡ ಅವರು ಲೆಕ್ಕಿಸದೇ ರೆಡ್​ ಕಾರ್ಪೆಟ್​ ಮೇಲೆ ಹೆಜ್ಜೆ ಹಾಕಿ ನಗುಮುಖದಿಂದ ಪೋಸ್​ ನೀಡಿದ್ದಾರೆ.​

ಇದನ್ನೂ ಓದಿ : ‘ಸಿ’ ಸಿನಿಮಾಗೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸಾಥ್..!

Leave a Comment

DG Ad

RELATED LATEST NEWS

Top Headlines

BTV mega exclusive : ಬೆಂಗಳೂರು ದಕ್ಷಿಣ ಎಸಿ ರಜನಿಕಾಂತ್ ವಿರುದ್ಧ ಭ್ರಷ್ಟಾಚಾರ ಆರೋಪ..!

ಬೆಂಗಳೂರು : ಜಮೀನು ಖಾತಾ ಮಾಡಿಕೊಡಲು ಫೋನ್​ ಪೇ / ಆನ್ ಲೈನ್ ಮೂಲಕ ಅಧಿಕಾರಿಯೊಬ್ಬರು ಲಂಚ ವಸೂಲಿ ಮಾಡಿರುವ ಆರೋಪವೊಂದು ಕೇಳಿದೆ ಬಂದಿದೆ. ಬೆಂಗಳೂರು ದಕ್ಷಿಣ

Live Cricket

Add Your Heading Text Here