Download Our App

Follow us

Home » ಅಪರಾಧ » ಲೈಂಗಿಕ ದೌರ್ಜನ್ಯ ಕೇಸ್ : ಸೋಮವಾರಕ್ಕೆ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ..!

ಲೈಂಗಿಕ ದೌರ್ಜನ್ಯ ಕೇಸ್ : ಸೋಮವಾರಕ್ಕೆ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ..!

ಬೆಂಗಳೂರು : ಕಿಡ್ನಾಪ್ ಕೇಸ್​ನಲ್ಲಿ ಬೇಲ್​​ ಪಡೆದು ಹೊರಬಂದ್ರೂ ರೇವಣ್ಣಗೆ ಇನ್ನೊಂದು ಕಂಟಕ ಶುರುವಾಗಿದೆ. ಹೊಳೆನರಸೀಪುರದಲ್ಲಿ ದಾಖಲಾಗಿದ್ದ ಲೈಂಗಿಕ ಕಿರುಕುಳ ಕೇಸ್‌ನಲ್ಲಿ ರೇವಣ್ಣ ಪ್ರಮುಖ ಆರೋಪಿಯಾಗಿದ್ದಾರೆ. ಇದೀಗ ಈ ಪ್ರಕರಣ ಸಂಬಂಧ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್​ ಸೋಮವಾರಕ್ಕೆ ಮುಂದೂಡಿದೆ.

ಸದ್ಯ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರೋ ಲೈಂಗಿಕ ಕಿರುಕುಳ ಕೇಸ್‌ನಲ್ಲಿ ರೇವಣ್ಣ ಮತ್ತೆ ಬಂಧನದ ಭೀತಿ ಎದುರಿಸುತ್ತಿದ್ದು, ಈ ಪ್ರಕರಣ ಸಂಬಂಧ ರೇವಣ್ಣ ಬೆಂಗಳೂರಿನ 42ನೇ ಎಸಿಎಂಎಂ ಜನಪ್ರತಿನಿಧಿಗಳ ಕೋರ್ಟ್‌ನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.

ನಿನ್ನೆ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಮಾಜಿ ಸಚಿವರಿಗೆ ಮಧ್ಯಂತರ ಜಾಮೀನು ನೀಡಿದೆ. ನ್ಯಾಯಾಲಯ ಇಂದು ಮಧ್ಯಾಹ್ನ 3 ಗಂಟೆವರೆಗೆ ಮಾತ್ರ ರೇವಣ್ಣರಿಗೆ ರಿಲೀಫ್ ಕೊಟ್ಟಿತ್ತು. ಇಂದು ಮಧ್ಯಾಹ್ನ ವಿಶೇಷ ನ್ಯಾಯಾಲಯದಲ್ಲಿ ಜಾಮೀನು ವಿಚಾರಣೆ ನಡೆದಿದ್ದು, ಇದೀಗ ಕೋರ್ಟ್​ ವಾದ ವಿವಾದಗಳನ್ನು ಆಲಿಸಿ ಜಾಮೀನು ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ.

ಇದನ್ನೂ ಓದಿ : ಒಟಿಟಿ ಅಬ್ಬರದಿಂದ ಚಿತ್ರಮಂದಿರಗಳಿಗೆ ಕಂಟಕ : 94 ಸಿನಿಮಾ ರಿಲೀಸ್ ಆದ್ರೂ ಒಂದೂ ಹಿಟ್ ಲಿಸ್ಟ್​ನಲ್ಲಿಲ್ಲ..!

Leave a Comment

DG Ad

RELATED LATEST NEWS

Top Headlines

ಶತಕೋಟಿ ಒಡೆಯ ನಿಖಿಲ್ ಕುಮಾರಸ್ವಾಮಿ.. ಪುತ್ರನ ಹೆಸರಲ್ಲಿದೆ 11 ಲಕ್ಷ..!

ರಾಮನಗರ: ಚನ್ನಪಟ್ಟಣ ಉಪಚುನಾವಣೆಯ ‘ಮೈತ್ರಿ’ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿ ಅವರು ಇಂದು ರೋಡ್ ಶೋ ಮೂಲಕ ತೆರಳಿ ನಾಮಿನೇಷನ್ ಸಲ್ಲಿಕೆ ಮಾಡಿದ್ದು, ತಮ್ಮ ಆಸ್ತಿ ವಿವರವನ್ನು  ಘೋಷಿಸಿಕೊಂಡಿದ್ದಾರೆ.

Live Cricket

Add Your Heading Text Here