Download Our App

Follow us

Home » ಸಿನಿಮಾ » ನಟಿ ಪವಿತ್ರಾ ಜಯರಾಮ್ ಸಾವಿನ ಬೆನ್ನಲ್ಲೇ ಆಪ್ತ ಸ್ನೇಹಿತ ಚಂದು ಆತ್ಮಹ*ತ್ಯೆ..!

ನಟಿ ಪವಿತ್ರಾ ಜಯರಾಮ್ ಸಾವಿನ ಬೆನ್ನಲ್ಲೇ ಆಪ್ತ ಸ್ನೇಹಿತ ಚಂದು ಆತ್ಮಹ*ತ್ಯೆ..!

ಕಿರುತೆರೆ ನಟಿ ಪವಿತ್ರಾ ಜಯರಾಮ್ ಸಾವಿನ ಬೆನ್ನಲ್ಲೇ ತೆಲುಗು ನಟ, ಪವಿತ್ರಾ ಜಯರಾಮ್ ಆಪ್ತ ಸ್ನೇಹಿತ (ಚಂದ್ರಕಾಂತ್) ಚಂದು ಆತ್ಮಹತ್ಯೆ ಮೂಲಕ ಬದುಕು ಮುಗಿಸಿದ್ದಾರೆ. ಶುಕ್ರವಾರದಂದು ತಮ್ಮ ಫ್ಲಾಟ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಟ್ಟಿನಲ್ಲಿ ಈ ವಾರ ನಟ-ನಟಿ ಇಬ್ಬರ ಸಾವು ಎಲ್ಲರನ್ನು ಅಚ್ಚರಿಗೆ ದೂಡುವಂತೆ ಮಾಡಿದೆ.

ಚಂದು ಮಣಿಕೊಂಡದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಇವತ್ತು ಪವಿತ್ರಾ ಹುಟ್ಟುಹಬ್ಬ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ಚಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ತೆಲುಗಿನ ಹಲವು ಧಾರಾವಾಹಿಗಳಲ್ಲಿ ಚಂದು ನಟಿಸುತ್ತಿದ್ದು, ಕೆಲ ಧಾರಾವಾಹಿಗಳಲ್ಲಿ ಚಂದು ಕೂಡ ಪವಿತ್ರಾರೊಂದಿಗೆ ನಟಿಸಿದ್ದರು. ಪವಿತ್ರಾ ಸಾವಿನ ಬಳಿಕ ಹೈದರಾಬಾದ್​​​ನ ಮಣಿಕೊಂಡದಲ್ಲಿರುವ ಮನೆಯಲ್ಲಿ ಚಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ.

2015ರಲ್ಲಿ ಶಿಲ್ಪಾಳನ್ನು ಪ್ರೀತಿಸಿ ಚಂದು ಮದುವೆ ಆಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ನಟಿ ಪವಿತ್ರಾ ಜಯರಾಮ್​ ಅವರ ಸಾವಿನಿಂದ ಮನನೊಂದು ಚಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಹೈದರಾಬಾದ್​ನ ನಾರಸಿಂಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇತ್ತೀಚೆಗೆ ಪವಿತ್ರಾ ಜಯರಾಮ್​ ಜೊತೆ ಚಂದು ಬೆಂಗಳೂರಿಗೆ ಬಂದಿದ್ದರು. ಸಿನಿಮಾವೊಂದಕ್ಕೆ ಸಹಿ ಮಾಡಿದ ಬಳಿಕ ಅವರು ಪುನಃ ಹೈದರಾಬಾದ್​ಗೆ ಹಿಂದಿರುಗುವಾಗ ಕಾರು ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಚಂದುಗೆ ಪೆಟ್ಟಾಗಿತ್ತು. ಅದನ್ನು ನೋಡಿ ಗಾಬರಿಗೊಂಡ ಪವಿತ್ರಾ ಅವರ ಉಸಿರು ನಿಂತುಹೋಗಿತ್ತು. ಇದೀಗ ಆ ದುರಂತದ ನೆನಪು ಮಾಸುವುದಕ್ಕೂ ಮುನ್ನವೇ ಚಂದು ನಿಧನರಾಗಿದ್ದಾರೆ.

ಇದನ್ನೂ ಓದಿ : ಬೆಂಗಳೂರಲ್ಲಿಂದು CSK vs RCB ಹೈ ವೋಲ್ಟೇಜ್ ಪಂದ್ಯ – ವಾಹನ ಸವಾರರೇ ಗಮನಿಸಿ, ಈ ಸ್ಥಳಗಳಲ್ಲಿ ಪಾರ್ಕಿಂಗ್ ನಿಷೇಧ..!

Leave a Comment

DG Ad

RELATED LATEST NEWS

Top Headlines

ಯಶಸ್ವಿಯಾಗಿ 75 ದಿನ ಪೂರೈಸಿದ ಗಣೇಶ್ ಅಭಿನಯದ ‘ಕೃಷ್ಣಂ ಪ್ರಣಯ ಸಖಿ’ ಚಿತ್ರ..!

ಗೋಲ್ಡನ್‌ ಸ್ಟಾರ್‌ ಗಣೇಶ್‌ ನಾಯಕನಾಗಿ ನಟಿಸಿರುವ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ಸೂಪರ್‌ ಹಿಟ್‌ ಪಟ್ಟ ಪಡೆದುಕೊಂಡಿದೆ. ಇತ್ತೀಚಿನ ಕೆಲ ದಿನಗಳಲ್ಲಿ ಬಿಡುಗಡೆಯಾದ ಸಿನಿಮಾಗಳ ಪೈಕಿ, ಕೃಷ್ಣ

Live Cricket

Add Your Heading Text Here