ತುಮಕೂರು : ಆಕಸ್ಮಿಕವಾಗಿ ಸಿಲಿಂಡರ್ ಸ್ಪೋಟಗೊಂಡು ಆರು ಮಂದಿ ತೀವ್ರವಾಗಿ ಗಾಯಗೊಂಡ ಘಟನೆ ತುಮಕೂರಿನ ಕುಣಿಗಲ್ ಪಟ್ಟಣದಲ್ಲಿ ನಡೆದಿದೆ. ಸ್ಪೋಟದ ತೀವ್ರತೆಗೆ ಮನೆಯ ಸಾಮಾಗ್ರಿಗಳು ಸುಟ್ಟು ಭಸ್ಮವಾಗಿದೆ. ಘಟನೆಯಲ್ಲಿ ಸಮೀನಾ(46), ಕುಶಾಲ್ (11) ಗಂಭೀರ ಗಾಯಗೊಂಡಿದ್ದು, ಮಂಜಮ್ಮ (42), ಶಿವಣ್ಣ(45), ಶ್ರುತಿ (45), ಹೇಮಲತಾ (16) ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಸಿದ್ಧಾರ್ಥ ಪ್ರೌಢಶಾಲೆ ಪಕ್ಕದ ರಸ್ತೆಯಲ್ಲಿರುವ ರವಿಕುಮಾರ್ ಎಂಬುವರ ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಂಡಿದೆ. ಸ್ಫೋಟದ ಪರಿಣಾಮ ಮನೆಯ ವಸ್ತುಗಳು ಬೆಂಕಿಗಾಹುತಿಯಾಗಿವೆ. ಇನ್ನು ಸಿಲಿಂಡರ್ ಸ್ಫೋಟದ ಶಬ್ದವನ್ನು ಕೇಳಿ ನೋಡಲು ಬಂದ ಅಕ್ಕ ಪಕ್ಕದ ಮನೆಯವರಿಗೂ ಗಾಯಗಳಾಗಿವೆ.
ಇನ್ನು ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ತೆರಳಿ ಬೆಂಕಿ ನಂದಿಸಿದ್ದಾರೆ. ಈ ಬಗ್ಗೆ ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡೊದ್ದಾರೆ.
ಇದನ್ನೂ ಓದಿ : ಪ್ರಜ್ವಲ್ ಪೆನ್ಡ್ರೈವ್ ಪ್ರಕರಣದ ಬಗ್ಗೆ ಮೌನ ಮುರಿದ ದೇವೇಗೌಡ್ರು : ಹೇಳಿದ್ದೇನು?