ಕಾರವಾರ : ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದ ಅರಬೈಲ್ ಘಟ್ಟದಲ್ಲಿ ನಡೆದಿದೆ.
ಕುಟುಂಬವೊಂದು ಕೊಪ್ಪಳದಿಂದ ಪ್ರವಾಸಕ್ಕೆಂದು ಅಂಕೋಲಾ ಕಡೆಗೆ ಹೊರಟಿತ್ತು. ಅರಬೈಲ್ ಘಟ್ಟದ ಬಳಿ ಓವರ್ಟೇಕ್ ಮಾಡುವ ಭರದಲ್ಲಿ ಯಮವೇಗದಲ್ಲಿ ಬಂದ ಲಾರಿಯೊಂದು ಕಾರಿಗೆ ಗುದ್ದಿದೆ. ಲಾರಿ ಗುದ್ದಿದ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಪರಿಣಾಮ ಕಾರಿನಲ್ಲಿದ್ದ ವೆಂಕಟೇಶ್, ಅವರ ಪತ್ನಿ ಚೈತ್ರಾ, ನಾಲ್ಕು ವರ್ಷದ ಮಗು ಶ್ರೀಹಾನ್ ಸ್ಥಳದಲ್ಲೇ ಅಸುನೀಗಿದ್ದಾರೆ.
ಇನ್ನು ಕಾರಿನಲ್ಲಿದ್ದ ಮೃತ ವೆಂಕಟೇಶ್ ಸಹೋದರ ಶ್ರೀಕಾಂತ್ ರೆಡ್ಡಿಯವರ ಎರಡು ಕಾಲಿಗೆ ಭೀಕರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಯಲ್ಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿನೆ ನಡೆಸಿದ್ದಾರೆ. ಲಾರಿ ಚಾಲಕನ ವಿರುದ್ದ ಪ್ರಕರಣ ದಾಖಲಾಗಿದೆ.
Author: Btv Kannada
Post Views: 2,366









