ಹಾವೇರಿ : ರಾಣೆಬೆನ್ನೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಸೇತುವೆಯಿಂದ ಕಾರು ಕೆಳಗೆ ಪಲ್ಟಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 6 ಮಂದಿಗೆ ಗಂಭೀರ ಗಾಯವಾಗಿದೆ.
ಕಾರಿನಲ್ಲಿದ್ದವರು ಹಾವೇರಿಯಿಂದ ತಿರುಪತಿ ದರ್ಶನಕ್ಕೆ ಹೋಗುತ್ತಿದ್ದರು ಎಂದು ತಿಳಿದು ಬಂದಿದೆ. ಹಲಗೇರಿ ಬೈಪಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ಸರ್ವಿಸ್ ರಸ್ತೆಗೆ ಕಾರು ಬಿದ್ದಿದ್ದು, ಅಪಘಾತದಲ್ಲಿ 45 ವರ್ಷದ ಸುರೇಶ್, 22 ವರ್ಷದ ಐಶ್ವರ್ಯ ಈರಪ್ಪ ಬಾರ್ಕಿ, 7 ವರ್ಷದ ಚೇತನಾ ಪ್ರಭುರಾಜ ಸಮಗಂಡಿ, 28 ವರ್ಷದ ಪವಿತ್ರಾ ಸಾವನ್ನಪ್ಪಿದ್ದಾರೆ.
ಇನ್ನು, ಕಾರಿನಲ್ಲಿದ್ದ ಚನ್ನವೀರಪ್ಪ. ಸಾವಿತ್ರಾ, ವಿಕಾಶ ಹೊನ್ನಪ್ಪ ಬಾರ್ಕಿ, ಹೊನ್ನಪ್ಪ ನೀಲಪ್ಪ ಬಾರ್ಕಿ, ಪ್ರಭುರಾಜ ಈರಪ್ಪ ಸಮಗಂಡಿ, ಗೀತಾ ಹೊನ್ನಪ್ಪ ಬಾರ್ಕಿ ಎಂಬವರಿಗೆ ಗಂಭೀರ ಗಾಯವಾಗಿದ್ದು, ಗಾಯಾಳುಗಳನ್ನು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ : ಕ್ರಿಕೆಟ್ ಜಗಳ ವಿಕೋಪಕ್ಕೆ ತಿರುಗಿ ಗುಂಪು ಘರ್ಷಣೆ – ಬೆಳಗಾವಿಯ ಅಳ್ವಾನ್ ಗಲ್ಲಿಯಲ್ಲಿ ಉದ್ವಿಗ್ನ ಪರಿಸ್ಥಿತಿ…!
Post Views: 377