ದಾವಣಗೆರೆ : ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಕಸ್ಟಡಿಯಲ್ಲಿದ್ದ ಆರೋಪಿ ಆದಿಲ್ ಸಾವನ್ನಪ್ಪಿದ್ದಾನೆ. ಆದಿಲ್ ಚನ್ನಗಿರಿ ಪಟ್ಟಣದ ಟಿಪ್ಪು ನಗರ ನಿವಾಸಿಯಾಗಿದ್ದು, ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕು ಪೊಲೀಸ್ ಠಾಣೆ ಮೇಲೆ ಮೃತನ ಕುಟುಂಬಸ್ಥರು ಲಾಕಪ್ ಡೆತ್ ಆರೋಪ ಮಾಡುತ್ತಿದ್ದಾರೆ.
ಪೊಲೀಸರು ನಿನ್ನೆ ಸಂಜೆ ಪೊಲೀಸ್ ಠಾಣೆಗೆ ಕರೆತಂದಿದ್ದರು. ಇದ್ದಕ್ಕಿದ್ದಂತೆ ಬಿಪಿ ಲೋ ಆಗಿದ್ದಕ್ಕೆ ಪೊಲೀಸರು ಆದಿಲ್ನನ್ನು ಆಸ್ಪತ್ರೆಗೆ ಸೇರಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆರೋಪಿ ಆದಿಲ್ ಸಾವನ್ನಪ್ಪಿದ್ದಾನೆ.
ಇದೀಗ ಆದಿಲ್ ಸಾವಿಗೆ ಪೊಲೀಸರೇ ಕಾರಣವೆಂದು ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ. ನೂರಾರು ಮಂದಿ ಪೊಲೀಸ್ ಠಾಣೆ ಮುಂದೆ ಜಮಾಯಿಸಿದ್ದು, ಜನರು ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ಸ್ಥಳಕ್ಕೆ ಡಿವೈಎಸ್ಪಿ ಪ್ರಶಾಂತ್, ಎಸ್ಪಿ ಮಂಜುನಾಥ್ ಭೇಟಿ ನೀಡಿದ್ದು, ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.
Post Views: 347