ಬೆಂಗಳೂರು : ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಲೀಡರ್ಸ್ ಪಟ್ಟು ಹಿಡಿದಿದ್ದಾರೆ.
ಈ ಪ್ರಕರಣದ ಸಂಬಂಧ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿ, ದಾಖಲೆ ಸಮೇತ ಸರ್ಕಾರದ ಭ್ರಷ್ಟಾಚಾರ ಬಯಲಾಗಿದೆ. ಈ ಸರ್ಕಾರದಕ್ಕೆ ಮಾನ ಮಾರ್ಯಾದೆ ಇಲ್ಲ.
ಈ ಕೂಡಲೇ ಸಚಿವರ ರಾಜೀನಾಮೆ ಪಡೆಯಬೇಕು. ಅಧಿಕಾರಿಗಳ ಹೆಸರು, ಮಂತ್ರಿ ಹೆಸರು ಬರೆದು ಸೂಸೈಡ್ ಮಾಡ್ಕೊಂಡಿದ್ದಾರೆ. ಸಿದ್ದರಾಮಯ್ಯ ಅವ್ರೇ ಈಗೇನು ಹೇಳ್ತೀರಾ ಎಂದು ಪ್ರಶ್ನಿಸಿದ್ದಾರೆ.
ಈಶ್ವರಪ್ಪ ರಾಜೀನಾಮೆ ಪಡೆದ್ದಂತೆ ನಾಗೇಂದ್ರ ರಾಜೀನಾಮೆ ಪಡೀರಿ. ಅಧಿಕಾರಿ ಆತ್ಮಹತ್ಯೆ ಖಂಡಿಸಿ ದೊಡ್ಡ ಹೋರಾಟ ಮಾಡುತ್ತೇವೆ ಎಂದು ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ಹೊರಹಾಕಿದ್ದಾರೆ. ಇದರೊಂದಿಗೆ ಮಾಜಿ ಸಿಎಂ ಸದಾನಂದ ಗೌಡ, ಮಾಜಿ ಸಚಿವ ಅಶ್ವತ್ಥ್ ನಾರಾಯಣ ಹಾಗೂ ಬಿ.ವೈ ವಿಜಯೇಂದ್ರ ಸೇರಿದಂತೆ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಇದನ್ನೂ ಓದಿ : ದೀಕ್ಷಿತ್ ಶೆಟ್ಟಿ ನಟನೆಯ ‘ಬ್ಯಾಂಕ್ of ಭಾಗ್ಯಲಕ್ಷ್ಮಿ’ ಚಿತ್ರದ ಅನಿಮೇಷನ್ ಟೀಸರ್ಗೆ ಮೆಚ್ಚುಗೆಯ ಮಹಾಪೂರ..!