ಕಲಬುರಗಿ : ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ, ಹಣ ಡಬಲ್ ಮಾಡಿಕೊಡುವುದಾಗಿ ನಂಬಿಸಿ ಬರೋಬ್ಬರಿ 500ಕ್ಕೂ ಅಧಿಕ ಜನರಿಗೆ ಕೋಟ್ಯಂತರ ರೂಪಾಯಿ ವಂಚಿಸಿ ಪರಾರಿ ಆಗಿದ್ದ ದಂಪತಿ ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ಕ್ಯಾಪಿಟಲ್ ಗ್ರೋ ಲರ್ನ್ ಟ್ರೇಡಿಂಗ್ ಕಂಪನಿಯ ಮಾಲೀಕ ಉತ್ಕರ್ಷ ವರ್ಧಮಾನೆ ಮತ್ತು ಪತ್ನಿ ಸಾವಿತ್ರಿ ವರ್ಧಮಾನೆ ಇಬ್ಬರು ಕಲಬುರಗಿ JMFC 2 ನ್ಯಾಯಾಲಯಕ್ಕೆ ಶರಣಾಗಿದ್ದಾರೆ.
ಇವರಿಬ್ಬರ ವಿರುದ್ಧ ಕೋಟ್ಯಂತರ ರೂಪಾಯಿ ವಂಚನೆ ಆರೋಪ ಕೇಳಿಬಂದಿತ್ತು. ವಂಚನೆ ಬಗ್ಗೆ ದೂರು ದಾಖಲಾಗುತ್ತಿದ್ದಂತೆ ಕಿಲಾಡಿ ದಂಪತಿ ಪರಾರಿಯಾಗಿದ್ದರು. ಕಳೆದ ಎರಡು ದಿನಗಳ ಹಿಂದೆ ಆರೋಪಿಗಳ ವಿರುದ್ಧ ರೋಜಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ದಂಪತಿಗಾಗಿ ಪೊಲೀಸರು ಹುಡುಕಾಟ ಶುರು ಮಾಡಿದ್ದರು. ಪ್ರಕರಣ ಸಂಬಂಧ ಸುಧಾ ಎನ್ನುವರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದರು. ಇದೀಗ ಆರೋಪಿತ ದಂಪತಿ ಕೋರ್ಟ್ ಮುಂದೆ ಶರಣಾಗಿದ್ದಾರೆ.
ಇನ್ನು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಿನ್ಸಿಪಲ್ ಜೆಎಂಎಫ್ಸಿ ನ್ಯಾಯಾಲಯವು ಇಬ್ಬರಿಗೂ 14 ದಿನ ನ್ಯಾಯಾಂಗ ಬಂಧನಕ್ಕೆ ಆದೇಶ ಹೊರಡಿಸಿದೆ. ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಬೆನ್ನಲ್ಲೆ ಪೊಲೀಸರು ಆರೋಪಿಗಳಿಗೆ ಮೆಡಿಕಲ್ ಟೆಸ್ಟ್ಗೆ ಕರೆದೊಯ್ದಿದ್ದಾರೆ. ನಂತರ ಕೇಂದ್ರಿಯ ಕಾರಾಗೃಹಕ್ಕೆ ಕರೆ ತಂದಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ : ಬಸ್ ಟಿಕೆಟ್ ವಿಚಾರಕ್ಕೆ ಗಲಾಟೆ – ಕಂಡಕ್ಟರ್ ಮೇಲೆ ಹೋಂಗಾರ್ಡ್ನಿಂದ ಹಲ್ಲೆ, ಇಬ್ಬರು ಅರೆಸ್ಟ್..!