ಬೆಂಗಳೂರು : ಪೆನ್ಡ್ರೈವ್ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣಗೆ ವಿಚಾರಣೆಗೆ ಹಾಜರಾಗುವಂತೆ SIT ನೋಟಿಸ್ ಜಾರಿ ಮಾಡಿದೆ. ಈ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ವಿಡಿಯೋ ರಿಲೀಸ್ ಮಾಡಿದ್ದು, ಅದರಲ್ಲಿ ತಾವು ಇದೇ ಮೇ.31ಕ್ಕೆ ಭಾರತಕ್ಕೆ ಬಂದು ಎಸ್ಐಟಿ ವಿಚಾರಣೆ ಹಾಜರಾಗುತ್ತಿರುವುದಾಗಿ ಹೇಳಿದ್ದಾರೆ. ಅದರಂತೆ ಪ್ರಜ್ವಲ್ ವಿಮಾನವನ್ನು ಬುಕ್ ಮಾಡಿದ್ದಾರೆನ್ನುವ ಮಾಹಿತಿ ಕೂಡ ಲಭ್ಯವಾಗಿದೆ.
ಈ ಮಧ್ಯೆ ವಿದೇಶದಿಂದ ಬರುವ ಮುನ್ನವೇ ಪ್ರಜ್ವಲ್ ರೇವಣ್ಣ ಕೋರ್ಟ್ ಮೊರೆ ಹೋಗಿದ್ದಾರೆ. ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನಿಗಾಗಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಪ್ರಜ್ವಲ್ ರೇವಣ್ಣ ವಕೀಲ ಅರುಣ್ ಮೂಲಕ ಅರ್ಜಿ ಸಲ್ಲಿಸಿದ್ದು, ನಾಳೆಯೇ ವಿಚಾರಣೆ ನಡೆಸುವಂತೆ ವಕೀಲರಿಗೆ ಮನವಿ ಮಾಡಿದ್ದಾರೆ.
ಪ್ರಜ್ವಲ್ ಪರ ವಕೀಲ ಅರುಣ್ ಅವರು ಇಂದು ಮಧ್ಯಾಹ್ನ ಜನಪ್ರತಿನಿಧಿಗಳ ಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿದರು. ಮೂರು ಅತ್ಯಾಚಾರ ಪ್ರಕರಣಕ್ಕೂ ಅರ್ಜಿ ಸಲ್ಲಿಕೆ ಮಾಡಿದ್ದು, ಸಂಜೆ ಪ್ರಜ್ವಲ್ ಪರ ವಕೀಲರು ಮಧ್ಯಂತರ ನಿರೀಕ್ಷಣಾ ಜಾಮೀನಿಗೆ ಕೋರ್ಟ್ ಮುಂದೆ ಮನವಿ ಮಾಡಿದರು.
ಇದನ್ನೂ ಓದಿ : ಬಗೆದಷ್ಟೂ ಬಯಲಾಗ್ತಿದೆ ವಾಲ್ಮೀಕಿ ನಿಗಮದ ಹಗರಣ : ಲೂಟಿಯಾಗಿದ್ದು 87 ಕೋಟಿಯಲ್ಲ 94.73 ಕೋಟಿ..!