ಹಾಸನ : ಪೆನ್ಡ್ರೈವ್ ಕೇಸಲ್ಲಿ ಸಿಲುಕಿ ವಿದೇಶಕ್ಕೆ ಪರಾರಿಯಾಗಿದ್ದ ಸಂಸದ ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ವಾಪಸ್ ಆಗೋದಕ್ಕೆ ಕೌಂಟ್ಡೌನ್ ಶುರುವಾಗಿದೆ. ಎಲ್ಲಾ ಅಂದ್ಕೊಂಡಂತೆ ಆದ್ರೆ ಜರ್ಮನಿಯ ಮ್ಯೂನಿಕ್ನಲ್ಲಿ ಗುರುವಾರ ಮಧ್ಯಾಹ್ನ 3.30ಕ್ಕೆ ಲುಫ್ತಾನ್ಸಾ ಏರ್ ಲೈನ್ಸ್ ವಿಮಾನ ಹತ್ತಲಿದ್ದಾರೆ. ಅಂದಾಜು 8 ಗಂಟೆಗಳ ಪ್ರಯಾಣದ ಬಳಿಕ ಮಧ್ಯರಾತ್ರಿ 12.30ಕ್ಕೆ ಬೆಂಗಳೂರಿಗೆ ಬಂದಿಳಿಯಲಿದ್ದಾರೆ.
ಇದೀಗ ಪ್ರಜ್ವಲ್ ವಾಪಾಸಾಗುವ ಹೊತ್ತಲ್ಲೇ ಹಾಸನದಲ್ಲಿ ಪ್ರಜ್ವಲ್ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. 113 ಸಂಘಟನೆಗಳ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಜೊತೆಗೆ ಸಾವಿರಾರು ಮಹಿಳೆಯರು ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಹಾಸನ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಹಾಸನ ಚಲೋ ನಡೆದಿದ್ದು, ಈ ಪ್ರತಿಭಟನೆಯಲ್ಲಿ 10,000ಕ್ಕೂ ಹೆಚ್ಚು ಜನರು ಭಾಗಿಯಾಗಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಹೋರಾಟಗಾರರು ಹಾಸನಕ್ಕೆ ಬಂದಿದ್ದರು.
ಪ್ರತಿಭಟನೆ ವೇಳೆ ಸುಭಾಷಿನಿ ಅಲಿ, ಎಸ್.ಬಾಲನ್ ಸೇರಿದಂತೆ ಹಲವು ಮುಖಂಡರ ಭಾಷಣ ಮಾಡಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರ್ತಿ ಸುಭಾಷಿಣಿ ಅಲಿ ಭಾಗಿಯಾಗಿದ್ದು, ಊಳಿಗಮಾನ್ಯ ಯಜಮಾನಿಕೆ, ಲೈಂಗಿಕ ದೌರ್ಜನ್ಯ ವಿರೋಧಿಸಿ ಚಲೋ ನಡೆದಿದೆ.
ಇದನ್ನೂ ಓದಿ : ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಕೇಸ್ಗೆ ಮೇಜರ್ ಟ್ವಿಸ್ಟ್ : ಚಂದ್ರಶೇಖರ್ ಮೇಲೆ ನೇರ ಒತ್ತಡ ಹೇರಿದ್ದ ಸಚಿವರು..!