ಮೈಸೂರು : ಲಂಚ ಸ್ವೀಕರಿಸುತ್ತಿದ್ದ ವೇಳೆ ಲೇಡಿ PSI ರೆಡ್ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮೈಸೂರಿನ ಕುವೆಂಪುನಗರ ಠಾಣೆ PSI ರಾಧಾ ಲೋಕ ಬಲೆಗೆ ಬಿದ್ದವರು.
ಕ್ರಿಮಿನಲ್ ಕೇಸ್ವೊಂದಕ್ಕೆ ಸಂಬಂಧಿಸಿದಂತೆ PSI ರಾಧಾ ಕುವೆಂಪುನಗರದ ವ್ಯಕ್ತಿಯಿಂದ 50,000 ಲಂಚ ಪಡೆಯುತ್ತಿದ್ದರು. ಲಂಚ ಪಡೆಯುವಾಗಲೇ ಲೋಕಾಯುಕ್ತ ಎಸ್ ಪಿ ಸಜಿತ್ ನೇತೃತ್ವದಲ್ಲಿ ಮೈಸೂರು, ಚಾಮರಾಜನಗರ ಲೋಕಾ ಅಧಿಕಾರಿಗಳ ರೇಡ್ ಮಾಡಿದ್ದಾರೆ.
PSI ರಾಧಾ 1 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದಆರೋಪ ಕೇಳಿಬಂದಿದೆ. ಈ ಸಂಬಂಧ ವ್ಯಕ್ತಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ದೂರಿನ ಮೇರೆಗೆ ದಾಳಿ ಮಾಡಿದಾಗ 50,000 ಲಂಚ ಪಡೆಯುವಾಗಲೇ PSI ಲೋಕಾಯುಕ್ತಕ್ಕೆ ಸಿಕ್ಕಿಬಿದ್ದಿದ್ದಾರೆ.
ಇದನ್ನೂ ಓದಿ : ಸಿಎಂ ಸಿದ್ದರಾಮಯ್ಯನವರೇ ಸಚಿವ ನಾಗೇಂದ್ರ ಮೇಲೆ FIR ಯಾಕೆ ಹಾಕಿಲ್ಲ- ವಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನೆ..!
Post Views: 959