Download Our App

Follow us

Home » ಜಿಲ್ಲೆ » ಚಿತ್ರದುರ್ಗ : ಲಾರಿಗೆ ಹಿಂಬದಿಯಿಂದ ಟಾಟಾ ಎಸ್ ಡಿಕ್ಕಿ – ಇಬ್ಬರು ಸಾ*ವು..!

ಚಿತ್ರದುರ್ಗ : ಲಾರಿಗೆ ಹಿಂಬದಿಯಿಂದ ಟಾಟಾ ಎಸ್ ಡಿಕ್ಕಿ – ಇಬ್ಬರು ಸಾ*ವು..!

ಚಿತ್ರದುರ್ಗ : ಜಿಲ್ಲೆಯ ಹಿರಿಯೂರು ಬಳಿಯ RK ಪವರ್ ಜಿನ್ ಬಳಿ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಟಾಟಾ ಎಸ್ ಡಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿದ್ದಾರೆ. 65 ವರ್ಷದ ಶಿವಲಿಂಗಪ್ಪ, 50 ವರ್ಷದ ರಮೇಶ್​ ಮೃತರು.

ಚಳ್ಳಕೆರೆ ಕಡೆಯಿಂದ ಹಿರಿಯೂರು ಕುರಿ ಮಾರುಕಟ್ಟೆಗೆ ತೆರಳುವಾಗ ಆಕ್ಸಿಡೆಂಟ್ ಆಗಿದೆ. ಟಾಟಾ ಏಸ್ ವಾಹನದಲ್ಲಿ ಕುರಿ ತುಂಬಿಕೊಂಡು ಮಾರುಕಟ್ಟೆಗೆ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ರಮೇಶ್ ಚಳ್ಳಕೆರೆ ತಾಲೂಕಿನ ಹುಲಿಕುಂಟೆ ನಿವಾಸಿ, ಶಿವಲಿಂಗಪ್ಪ ಬೆಳೆಗೆರೆ ಗ್ರಾಮದ ನಿವಾಸಿಯಾಗಿದ್ದಾರೆ.

ಟಾಟಾ ಏಸ್ ಚಾಲಕನ ಅತಿವೇಗ & ಅಜಾಗರೂಕತೆ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಚಾಲಕನಿಗೆ ಗಂಭೀರ ಗಾಯಗಳಾಗಿದ್ದು ಹಿರಿಯೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಪೊಲೀಸ್ ಇನ್ಸ್​ಪೆಕ್ಟರ್ ಕಾಳಿಕೃಷ್ಣ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಇದನ್ನೂ ಓದಿ : ಇಂಗ್ಲೆಂಡ್​ನಿಂದ ಭಾರತಕ್ಕೆ 100 ಟನ್ ಚಿನ್ನ ವಾಪಸ್ ತಂದ ಆರ್​ಬಿಐ..!

 

 

 

 

 

Leave a Comment

DG Ad

RELATED LATEST NEWS

Top Headlines

ಬಿಗ್ ಬಾಸ್ ವೇದಿಕೆಯಲ್ಲಿ ಸಲ್ಮಾನ್ ಖಾನ್‌ಗೆ ಮದುವೆ ಪ್ರಪೋಸಲ್ ಇಟ್ಟ ನಟಿ..!

ಬಿಗ್ ಬಾಸ್, ಅತ್ಯಂತ ಜನಪ್ರಿಯ ಕಾರ್ಯಕ್ರಮ. ಹಿಂದಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ ಅನ್ನು ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ನಡೆಸಿಕೊಡುತ್ತಿದ್ದಾರೆ. ಇದೀಗ ಬಿಗ್ ಬಾಸ್ ವೇದಿಕೆಯಲ್ಲಿ

Live Cricket

Add Your Heading Text Here