ನಿರೀಕ್ಷೆಯಂತೆ ಜೂನ್ ತಿಂಗಳ ಮೊದಲ ವಾರದಲ್ಲಿ ಕರ್ನಾಟಕಕ್ಕೆ ಮುಂಗಾರು ಪ್ರವೇಶಿಸಿದ್ದು, ಕಳೆಡೆರಡು ದಿನಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಅದರಲ್ಲೂ ನಿನ್ನೆ ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆ ಜನರನ್ನು ಬೆಚ್ಚಿ ಬೀಳಿಸಿದೆ.
ನಿನ್ನೆಯಂತೆ ಇಂದು ಬೆಂಗಳೂರಿನಲ್ಲಿ ಮಧ್ಯಾಹ್ನದ ನಂತರ ಮಳೆ ಅಬ್ಬರಿಸುವ ಸಾಧ್ಯತೆಯಿದ್ದು, ಗಂಟೆಗೆ 40-52 ಕಿಮೀ ವೇಗದಲ್ಲಿ ಗಾಳಿ ಬೀಸುತ್ತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಮಳೆಗೆ ನಗರದ ಅನೇಕ ಕಡೆ ಭಾರೀ ಅವಾಂತರಗಳು ಸಂಭವಿಸಿವೆ. ಅದೇ ರೀತಿ ಇಂದು ಕೂಡ ಮಳೆಯಾಗುವ ಸಾಧ್ಯತೆಯಿದ್ದು, ಮುನ್ನೆಚ್ಚರಿಕ ಕ್ರಮವಾಗಿ ಮರದ ಕೆಳಗೆ ಬೈಕ್, ಕಾರು ನಿಲ್ಲಿಸೋ ಎಚ್ಚರವಹಿಸಿ ಹಾಗೂ ಮಳೆ ಬಂದಾಗ ಅಂಡರ್ಪಾಸ್ ರಸ್ತೆಗಳನ್ನು ಅವೈಡ್ ಮಾಡಿ.
ಇನ್ನು ಬೆಂಗಳೂರು ಅಷ್ಟೇ ಅಲ್ಲೆ ಉಡುಪಿ, ದಕ್ಷಿಣಕನ್ನಡ, ಕೊಡಗು, ಮೈಸೂರು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆಯಿದೆ. ವಿಜಯಪುರ, ಬಾಗಲಕೋಟೆ, ಕೊಪ್ಪಳ, ವಿಜಯನಗರ, ದಾವಣಗೆರೆ, ಬಳ್ಳಾರಿ, ಗದಗ, ಧಾರವಾಡದಲ್ಲೂ ಭಾರೀ ಮಳೆ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ : ಮಹಿಳೆ ಕಿಡ್ನಾಪ್ ಕೇಸ್ : ಭವಾನಿ ರೇವಣ್ಣ ಬಂಧನಕ್ಕೆ ಮೂರು ರಾಜ್ಯಗಳಲ್ಲಿ SIT ಟೀಂ ಸರ್ಚಿಂಗ್..!
Post Views: 109