ಯಾದಗಿರಿ : ಲೋಕಸಭಾ ಚುನಾವಣೆ ಜೊತೆಗೆ ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆಯ ಮತ ಏಣಿಕೆ ನಡೆದಿದೆ. ಸುರಪುರ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜಾ ವೇಣುಗೋಪಾಲ ನಾಯಕ ಭರ್ಜರಿ ಗೆಲುವು ಸಾಧಿಸಿದ್ದಾರೆ.
18,320 ಮತಗಳ ಅಂತರದಿಂದ ಕೈ ಅಭ್ಯರ್ಥಿ ರಾಜಾ ವೇಣುಗೋಪಾಲ ನಾಯಕ ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ. 23 ಸುತ್ತಿನ ಮತ ಎಣಿಕೆ ಬಳಿಕ ಚುನಾವಣಾಧಿಕಾರಿಗಳು ಅಧಿಕೃತವಾಗಿ ಕಾಂಗ್ರೆಸ್ ಅಭ್ಯರ್ಥಿಗೆ ಜಯ ಸಿಕ್ಕಿರುವುದನ್ನು ಘೋಷಿಸಿದೆ.
ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆದಿತ್ತು, ಇದೀಗ ರಾಜಾ ವೆಂಕಟಪ್ಪ ನಾಯಕ ಅವರ ಮಗ ರಾಜಾ ವೇಣುಗೋಪಾಲ ನಾಯಕ ಶಾಸಕನಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿ ಅಭ್ಯರ್ಥಿ ರಾಜುಗೌಡ ಒಟ್ಟು 96,566 ಮತಗಳನ್ನು ಪಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ರಾಜಾ ವೇಣುಗೋಪಾಲ ನಾಯಕ 1,14,886 ಮತಗಳನ್ನು ಪಡೆದಿದ್ದಾರೆ. ಒಟ್ಟು 848 ನೋಟಾ ಮತಗಳಾಗಿದೆ.
ಇದನ್ನೂ ಓದಿ : ತುಳುನಾಡು ಮಲೆನಾಡಿನಲ್ಲಿ ಮತ್ತೆ ಅರಳಿದ ಕಮಲ : ಮಂಗಳೂರಿಗೆ ಚೌಟ, ಉಡುಪಿಗೆ ಕೋಟ..!