ಲೋಕಸಭಾ ಚುನಾವಣೆಯ ಫಲಿತಾಂಶ ರಣರೋಚಕವಾಗಿದೆ. ದೇಶಾದ್ಯಂತ ಮತಎಣಿಕೆ ಬಿರುಸಿನಿಂದ ನಡೆಯುತ್ತಾ ಇದ್ದು, ಯಾರ್ ಗೆಲ್ತಾರೆ? ಯಾರ್ ಸೋಲ್ತಾರೆ ಅನ್ನೋ ಕುತೂಹಲ ಮುಗಿಲು ಮುಟ್ಟಿದೆ.
ಇದರ ನಡುವೆ ಕಲ್ಯಾಣ ಕರ್ನಾಟಕ ಭಾಗದ ಮತದಾರರಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಬಂಪರ್ ಗಿಫ್ಟ್ ಸಿಕ್ಕಿದೆ. ಕಲ್ಯಾಣ ಕರ್ನಾಟಕದ ೫ ಲೋಕಸಭಾ ಸ್ಥಾನಗಳು ಕಾಂಗ್ರೆಸ್ ತೆಕ್ಕೆಗೆ ಸೆರಿಕೊಂಡಿದೆ.
ಕಲಬುರಗಿ, ಬೀದರ್,ರಾಯಚೂರು,ಕೊಪ್ಪಳ ಹಾಗು ಬಳ್ಳಾರಿ ಲೋಕಸಭೆಯಲ್ಲಿ ಕೈಗೆ ಜಯ ಸಿಕ್ಕಿದೆ. ಈ ಹಿಂದೆ ೫ ಸ್ಥಾನಗಳಲ್ಲಿ ಬಿಜೆಪಿ ಜಯಗಳಿಸಿತ್ತು. ಆದರೆ ಈ ಬಾರಿ ಎಐಸಿಸಿ ಅಧ್ಯಕ್ಷ ಖರ್ಗೆ ಆದ ಬಳಿಕ ಕಾಂಗ್ರೆಸ್ ಕ್ಲೀನ್ ಸ್ವೀಪ್ ಸಾಧಿಸಲು ಸಾಧ್ಯವಾಗಿದೆ.
ಇದನ್ನೂ ಓದಿ : AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಬಂಪರ್ ಗಿಫ್ಟ್ – ಕಲ್ಯಾಣ ಕರ್ನಾಟಕದ 5 ಲೋಕಸಭಾ ಸ್ಥಾನಗಳು ಕಾಂಗ್ರೆಸ್ ತೆಕ್ಕೆಗೆ..!
Post Views: 32