Download Our App

Follow us

Home » ರಾಜಕೀಯ » ಮೂರನೇ ಬಾರಿ ಎನ್‌ಡಿಎಗೆ ಆಶೀರ್ವಾದ ಸಿಕ್ಕಿದೆ – ದೇಶದ ಜನತೆಗೆ ಪ್ರಧಾನಿ ಮೋದಿ ಕೃತಜ್ಞತೆ..!

ಮೂರನೇ ಬಾರಿ ಎನ್‌ಡಿಎಗೆ ಆಶೀರ್ವಾದ ಸಿಕ್ಕಿದೆ – ದೇಶದ ಜನತೆಗೆ ಪ್ರಧಾನಿ ಮೋದಿ ಕೃತಜ್ಞತೆ..!

ನವದೆಹಲಿ : ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎ ಹೆಚ್ಚಿನ ಸೀಟುಗಳನ್ನು ಗಳಿಸಿ ಸರ್ಕಾರ ರಚನೆಗೆ ಸಿದ್ಧವಾಗುತ್ತಿದೆ. ಈ ಹಿನ್ನಲೆಯಲ್ಲಿ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪಕ್ಷದ ಕಾರ್ಯಕ್ರಮ ಆಯೋಜಿಸಿಸಲಾಗಿತ್ತು. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದು, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಬಿಜೆಪಿ ನಾಯಕರು, ಪಕ್ಷದ ಕಾರ್ಯಕರ್ತರು ಪ್ರಧಾನಿಯನ್ನು ಹೂಮಳೆಗೆರೆದು ಸ್ವಾಗತಿಸಿದ್ದಾರೆ.

ಬಳಿಕ ಪಕ್ಷದ ಕಾರ್ಯಕರ್ತರು ಹಾಗೂ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಿಮ್ಮ ಈ ಪ್ರೀತಿ, ಈ ಆಶೀರ್ವಾದಕ್ಕಾಗಿ ನಾನು ದೇಶದ ಜನರಿಗೆ ಋಣಿ. ನಾವೆಲ್ಲರೂ ಜನರಿಗೆ ಅಭಾರಿಯಾಗಿದ್ದೇವೆ. ದೇಶದ ಜನರು ಬಿಜೆಪಿ, ಎನ್‌ಡಿಎ ಮೇಲೆ ಪೂರ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮೂರನೇ ಬಾರಿ ಎನ್‌ಡಿಎಗೆ ಆಶೀರ್ವಾದ ಸಿಕ್ಕಿದೆ. ಇದಕ್ಕಾಗಿ ನಾನು ತಲೆ ಬಾಗಿ ಧನ್ಯವಾದ ಸಲ್ಲಿಸುತ್ತೇನೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಜನತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಈ ವಿಜಯ ಪ್ರಪಂಚದ ಅತಿದೊಡ್ಡ ಪ್ರಜಾಪ್ರಭುತ್ವ ಜಯ. ಇದು ವಿಕಸಿತ ಭಾರತದ ಜಯ. ಇದು ಸಬ್ ಕಾ ಸಾಥ್, ಸಬ್ ಕಾ ವಿಕಾಸ್‌ಗೆ ಸಿಕ್ಕ ಜಯ. 140 ಕೋಟಿ ಜನರ ಗೆಲುವಾಗಿದೆ ಎಂದು ನಮಿಸಿದರು. ನಾನು ಚುನಾವಣಾ ಆಯೋಗಕ್ಕೂ ಅಭಿನಂಧನೆ ಸಲ್ಲಿಸುತ್ತೇನೆ. ವಿಶ್ವದ ದೊಡ್ಡ ಚುನಾವಣೆಯನ್ನು ಅಚ್ಚುಕಟ್ಟಾಗಿ ಮಾಡಿದೆ. ನೂರು ಕೋಟಿ ಮತದಾರರು, 11 ಕೋಟಿ ಬೂತ್, 55 ವೋಟಿಂಗ್ ಮಷಿನ್, ತೀವ್ರ ಬಿಸಿಲಿನ ನಡುವೆ ಕರ್ತವ್ಯ ನಿಭಾಯಿಸಿದ್ದಾರೆ. ಭದ್ರತಾ ಪಡೆಗಳು ನಿಷ್ಠೆಯಿಂದ ಕೆಲಸ ಮಾಡಿವೆ. ಚುನಾವಣೆಯ ಪೂರ್ಣ ವ್ಯವಸ್ಥೆ, ಎಲ್ಲ ಭಾರತೀಯರಿಗೆ ಹೆಮ್ಮೆ ಪಡುವ ಸಂಗತಿ. ಇದಕ್ಕೆ ವಿಶ್ವದಲ್ಲಿ ಮತ್ತೇಲ್ಲಿ ಉದಾಹರಣೆ ಇಲ್ಲ ಎಂದು ಸ್ಮರಿಸಿದರು.

ಇದನ್ನೂ ಓದಿ : ತಗ್ಗಿತಾ ಮೋದಿ ವರ್ಚಸ್ಸು? ಸರಳ ಬಹುಮತಕ್ಕೆ ಕುಸಿದಿದ್ದೇಕೆ NDA?

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here