ಹಾಸನ : ಬೆಳ್ಳಂಬೆಳಗ್ಗೆ ನಗರದಲ್ಲಿ ನೆತ್ತರು ಹರಿದಿದ್ದು, ನಟೋರಿಯಸ್ ರೌಡಿ ಚೈಲ್ಡ್ ರವಿಯನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ಜಿಲ್ಲೆಯ ಹೇಮಾವತಿ ನಗರದಲ್ಲಿ ಘಟನೆ ನಡೆದಿದ್ದು, ಕುಡಿಯುವ ನೀರು ತೆಗೆದುಕೊಂಡು ಬೈಕ್ನಲ್ಲಿ ತೆರಳುತ್ತಿದ್ದಾಗ ಅಟ್ಯಾಕ್ ಮಾಡಿ, ಮಾರಕಾಸ್ತ್ರಗಳಿಂದ ರಸ್ತೆಯಲ್ಲಿ ಕೊಚ್ಚಿ ಹತ್ಯೆ ಮಾಡಿ ಕೊಲೆಗಡುಕರು ಎಸ್ಕೇಪ್ ಆಗಿದ್ದಾರೆ.
ಕೊಲೆ, ಅತ್ಯಾಚಾರ, ದರೋಡೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಚೈಲ್ಡ್ ರವಿ (45) ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದ್ದವು. ವೈಯಕ್ತಿಕ ಸೇಡಿನಿಂದ ಹತ್ಯೆ ನಡೆದಿದೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ಕೇಸ್ – ತೆಲಾಂಗಣ ಸಹಕಾರ ಸಂಘದ ಅಧ್ಯಕ್ಷ ಅರೆಸ್ಟ್..!
Post Views: 574