ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ಭಾರೀ ಮತದಿಂದ ಗೆಲುವು ಸಾಧಿಸಿದ್ದಾರೆ. ಇದರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ತಮ್ಮ ಸ್ಥಾನಕ್ಕೆ ಯಾವಾಗ ರಾಜೀನಾಮೆ ನೀಡುತ್ತಾರೆ ಎಂಬ ಚರ್ಚೆಗಳು ಜೋರಾಗಿಯೇ ಇದೆ. ಇದರ ಮಧ್ಯೆ ಇದೀಗ ಪ್ರದೀಪ್ ಈಶ್ವರ್ ಅವರ ರಾಜೀನಾಮೆ ಪತ್ರ ವೈರಲ್ ಆಗಿದೆ.
ಪ್ರದೀಪ್ ಈಶ್ವರ್ ರಾಜೀನಾಮೆ ಪತ್ರ ಸ್ಪೀಕರ್ ಖಾದರ್ಗೆ ರವಾನೆಯಾಗಿದೆ. ಈ ಪತ್ರದಲ್ಲಿ ಪ್ರದೀಪ್ ಈಶ್ವರ್ ಸಹಿ ಇರುವ ರಾಜೀನಾಮೆ ಪತ್ರ ವೈರಲ್ ಆಗಿದೆ. ವೈರಲ್ ಆಗುತ್ತಿರುವ ಪತ್ರದಲ್ಲಿ, ಬಾಲ್ಯದಿಂದಲೇ ಪುಣ್ಯ ಕೋಟಿ ಕಥೆಯನ್ನು ಆದರ್ಶವಾಗಿರಿಸಿಕೊಂಡು, “ಕೊಟ್ಟ ಮಾತು- ಇಟ್ಟ ಹೆಜ್ಜೆ ತಪ್ಪಬಾರದು” ಅನ್ನೋ ಮಾತನ್ನು ಜೀವನದುದ್ದಕ್ಕೂ ಪಾಲಿಸುತ್ತಾ ಬಂದವನು ನಾನು. ನಾನು ಕೆಲ ದಿನಗಳ ಹಿಂದೆ ಮಾಜಿ ಸಚಿವರಾದ ಡಾ.ಕೆ ಸುಧಾಕರ್ ಅವರು ಲೋಕಸಭೆ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಒಂದು ಮತವನ್ನು ಲೀಡ್ ತೆಗೆದುಕೊಂಡರೆ ನಾನು ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಾರ್ವಜನಿಕವಾಗಿ ಹೇಳಿರುತ್ತೇನೆ. ಸುಧಾಕರ್ ಅವರು ಸುಮಾರು 20 ಸಾವಿರ ಮತಗಳನ್ನು ನನ್ನ ಕ್ಷೇತ್ರದಲ್ಲಿ ಮುನ್ನಡೆ ಪಡೆದುಕೊಂಡಿರುವುದರಿಂದ ನಾನು ಹಿಂದೆ ಆಡಿದ ಮಾತಿಗೆ ಬದ್ಧನಾಗಿ ಸ್ವಇಚ್ಛೆಯಿಂದ ನನ್ನ ವಿಧಾನಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆಯನ್ನು ನೀಡುತ್ತಿದ್ದೇನೆ ಎಂದು ಬರೆಯಲಾಗಿದೆ.
ಇದನ್ನೂ ಓದಿ : ಕೊನೆಗೂ ಡಿವೋರ್ಸ್ ಹಿಂದಿನ ಕಾರಣ ಬಿಚ್ಚಿಟ್ಟ ನಟಿ ಪ್ರೇಮಾ..!