2024 ರ ಲೋಕಸಭೆ ಚುನಾವಣೆಯ ಫಲಿತಾಂಶ ಈಗಾಗಲೇ ಹೊರಬಿದ್ದಿದೆ. ಇದರ ಬೆನ್ನಲ್ಲೇ ಎರಡೇ ತಿಂಗಳಲ್ಲಿ ಮತ್ತೊಂದು ಮಹಾಯುದ್ಧ ಆರಂಭವಾಗಲಿದ್ದು, ಮತ್ತೊಂದು ಮಹಾ ಚುನಾವಣೆಗೆ ಕರ್ನಾಟಕ ಸಾಕ್ಷಿಯಾಗಲಿದೆ.
ಎಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಚನ್ನಪಟ್ಟಣ ಕ್ಷೇತ್ರದ ಶಾಸಕ ಸ್ಥಾನಕ್ಕೆ ಸೋಮವಾರ ರಾಜೀನಾಮೆ ನೀಡಲಿದ್ದಾರೆ. ಇದರ ಬೆನ್ನಲ್ಲೇ ಎರಡು ತಿಂಗಳಲ್ಲಿ ಚನ್ನಪಟ್ಟಣಕ್ಕೆ ಉಪಚುನಾವಣೆ ಸಾಧ್ಯತೆಯಿದ್ದು, ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರನ್ನುಕಣಕ್ಕಿಳಿಸಲು ಜೆಡಿಎಸ್ ವರಿಷ್ಠರು ತಯಾರಿ ನಡೆಸುತ್ತಿದ್ದಾರೆ.
ಇನ್ನು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್ ಮಂಜುನಾಥ್ ಎದುರು ಸೋಲು ಕಂಡಿರುವ ಕಾಂಗ್ರೆಸ್ನ ಡಿ.ಕೆ ಸುರೇಶ್ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ. ಈ ಮೂಲಕ ಗ್ರಾಮಾಂತರ ಸೋಲಿನ ಸೇಡು ತೀರಿಸಿಕೊಳ್ಳಲು ಬೈ ಎಲೆಕ್ಷನ್ ಅಖಾಡ ರೆಡಿಯಾಗಿದ್ದು, ಮೈತ್ರಿಗೆ ತಿರುಗೇಟು ಕೊಡಲು ಡಿಕೆ ಬ್ರದರ್ಸ್ ಪ್ಲಾನ್ ಮಾಡ್ತಿದ್ದಾರೆ.
ಇದನ್ನೂ ಓದಿ: ಇಂದೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ಸಾಧ್ಯತೆ – ಸಿಎಂ ಸಿದ್ದರಾಮಯ್ಯ ಕೊಟ್ಟ ಸೂಚನೆಯೇನು?